Featured

ಕೇರಳ : ವಿಶೇಷಚೇತನ ಪತ್ನಿಯನ್ನು ಹಾವಿನಿಂದ ಕಚ್ಚಿಸಿ  ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ – Vishwanews24

ಕೇರಳ : ವಿಶೇಷಚೇತನ ಪತ್ನಿಯನ್ನು ಹಾವಿನಿಂದ ಕಚ್ಚಿಸಿ  ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ – Vishwanews24

ಕೇರಳ : ವಿಶೇಷಚೇತನ ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಲೆ ಮಾಡಿದ ಪತಿ ಆರೋಪಿ ಸೂರಜ್ ಗೆ ಕೇರಳದ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನಾಗರಹಾವಿನಿಂದ ಕಚ್ಚಿಸಿ ಪತ್ನಿಯನ್ನು ಸೂರಜ್‌ ಕೊಲೆ ಮಾಡಿದ್ದ ಪ್ರಕರಣವು ಕೇರಳದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಮೊದಲ ಬಾರಿ ಮಂಡಲದ ಹಾವು ಬಳಸಿ ಕೊಲೆಗೆ ವಿಫಲ ಯತ್ನವನ್ನು ನಡೆಸಿದ್ದ ಅರೋಪ ಸೂರಜ್‌ ಮೇಲಿತ್ತು. ಎರಡನೇ ಬಾರಿ ನಾಗರ ಹಾವು ಬಳಸಿ ಆಕೆ ಸಾವಿಗೆ ಕಾರಣನಾಗಿದ್ದ. 2020ರ ಮೇ 7ರಂದು ನಾಗರ ಹಾವು ಕಡಿತದಿಂದ ಉತ್ರಾ ಸಾವನ್ನಪ್ಪಿದ ಬಳಿಕ ಆಕೆಯ ಕುಟುಂಬದವರು ವರದಕ್ಷಿಣೆ ಕಿರುಕುಳ ಆರೋಪದ ಪ್ರಕರಣವನ್ನು ಸೂರಜ್‌ ವಿರುದ್ಧ ದಾಖಲಿಸಿದ್ದರು. ನಂತರ ಸಾರ್ವಜನಿಕವಾಗಿ ಹೇಳಿಕೆ ನೀಡಿದ ಸೂರಜ್, ಹಾವು ಕಡಿತದಿಂದ ಉತ್ರಾ ಮೃತಪಟ್ಟಿದ್ದಾಳೆ ಎಂದಿದ್ದ.

ಸೂರಜ್ ಎಸ್ ಕುಮಾರ್ ವಿರುದ್ಧ ಕೊಲೆ, ವಿಷ ಪ್ರಾಶನ, ಸಾಕ್ಷ್ಯ ನಾಶ ಪ್ರಕರಣ ದಾಖಲಾಗಿತ್ತು ಅಲ್ಲದೆ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಮೊದಲ ಬಾರಿಗೆ ಹಾವಿನಿಂದ ಕಚ್ಚಿಸಿ ಸಾಯಿಸಲು ಯತ್ನಿಸಿದ್ದನ್ನೂ ಕೊಲೆ ಎಂದು ಪರಿಗಣಿಸಿದ ನ್ಯಾಯಾಲಯ, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ-VI ಮನೋಜ್ ಎಂ ಅವರು ಶಿಕ್ಷೆಯ ತೀರ್ಪನ್ನು ಪ್ರಕಟಿಸಿದ್ದಾರೆ. ‘ಇದೊಂದು ಅಪರೂಪದ ಪ್ರಕರಣವಾಗಿದೆ. ಅಪರಾಧಿ ವಯಸ್ಸು 28 ವರ್ಷಗಳಾಗಿರುವುದರಿಂದ, ಮರಣದಂಡನೆಯ ಬದಲಿಗೆ ಜೀವಾವಧಿ ಶಿಕ್ಷೆ ನೀಡಲು ತೀರ್ಮಾನಿಸಿದರು’ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಿ ಮೋಹನರಾಜ್ ನ್ಯಾಯಾಲಯದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಆರೋಪಿ ಕುಮಾರ್‌ಗೆ, ಕೊಲೆ ಆರೋಪ ಸಾಬೀತಾಗಿದ್ದಕ್ಕೆ ಜೀವಾವಧಿ ಶಿಕ್ಷೆ, ಕೊಲೆ ಯತ್ನಕ್ಕೆ ಜೀವಾವಧಿ ಶಿಕ್ಷೆ ಹಾಗೂ ವಿಷ ಉಣಿಸಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶಕ್ಕಾಗಿ 7 ವರ್ಷಗಳ ಕಾಲ ನ್ಯಾಯಾಲಯ ಶಿಕ್ಷೆ ವಿಧಿಸಿದೆ ಎಂದು ಎಸ್‌ಪಿಪಿ ತಿಳಿಸಿದರು.

ವಿಷಪ್ರಾಶನ ಮತ್ತು ಸಾಕ್ಷ್ಯಾಧಾರಗಳ ನಾಶಕ್ಕಾಗಿ ವಿಧಿಸಿದ ಶಿಕ್ಷೆಯನ್ನು ಮೊದಲು ನೀಡಬೇಕು ಎಂದು ನ್ಯಾಯಾಲಯ ನಿರ್ದಿಷ್ಟವಾಗಿ ನಿರ್ದೇಶಿಸಿದೆ ಎಂದು ಅವರು ಹೇಳಿದರು. ಒಟ್ಟು 17 ವರ್ಷಗಳ ಸೆರೆವಾಸ ಮತ್ತು ನಂತರ ಆತನ ಜೀವಾವಧಿ ಶಿಕ್ಷೆ ಆರಂಭವಾಗುತ್ತದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago