Featured

ಕೇರಳ ಶರೋನ್ ರಾಜ್ ಕೊಲೆ ಪ್ರಕರಣ :ಅಪರಾಧಿ ಪ್ರೇಯಸಿಗೆ ಮರಣದಂಡನೆ ಶಿಕ್ಷೆ  – vishwanews24

ಕೇರಳ  ಶರೋನ್ ರಾಜ್ ಕೊಲೆ ಪ್ರಕರಣ :ಅಪರಾಧಿ ಪ್ರೇಯಸಿಗೆ ಮರಣದಂಡನೆ ಶಿಕ್ಷೆ

ತಿರುವನಂತಪುರಂ: ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಹೇಳಿಕೆಯನ್ನು ಕೋರ್ಟ್ ತಿರಸ್ಕರಿಸಿತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಆಕೆಯ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೆ 3 ವರ್ಷಗಳ ಜೈಲು ಶಿಕ್ಷೆಯನ್ನು ಕೂಡ ವಿಧಿಸಿ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ.

ಇನ್ನು 24 ವರ್ಷದ ಅಪರಾಧಿ ಗ್ರೀಷ್ಮಾ ಮರಣದಂಡನೆ ಶಿಕ್ಷೆ ಅನುಭವಿಸಿದ ಭಾರತದ ಅತ್ಯಂತ ಕಿರಿಯ ಯುವತಿಯಾಗಿದ್ದಾಳೆ. ತನ್ನ ಶೈಕ್ಷಣಿಕ ಸಾಧನೆಗಳು, ಹಿಂದೆ ಯಾವುದೇ ಅಪರಾಧ ಮಾಡಿಲ್ಲ ಮತ್ತು ತಾನು ತನ್ನ ಹೆತ್ತವರ ಏಕೈಕ ಮಗಳು ಎಂಬ ಅಂಶವನ್ನು ಉಲ್ಲೇಖಿಸಿ ಆಕೆ ಶಿಕ್ಷೆಯಲ್ಲಿ ಸಡಿಲಿಕೆಗೊಳಿಸುವಂತೆ ಕೋರ್ಟ್ ಮೊರೆ ಹೋಗಿದ್ದಳು. ಆದರೆ, 586 ಪುಟಗಳ ತೀರ್ಪಿನಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸಿ ಈ ಬಗ್ಗೆ ಗಮನಹರಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಗ್ರೀಷ್ಮಾ ಹಂತ ಹಂತವಾಗಿ ಈ ಕೃತ್ಯ ಎಸಗಲು ಸಂಚು ರೂಪಿಸಿದ್ದಳು. ಆಕೆಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎನ್ನಲು ಸಾಧ್ಯವಿಲ್ಲ. ಏಕೆಂದರೆ ಆಕೆ ಈ ಮೊದಲು ಕೂಡ ಯುವಕನನ್ನು ಕೊಲೆ ಮಾಡಲು ಯತ್ನಿಸಿದ್ದಳು. ತನಿಖೆಯನ್ನು ಬೇರೆಡೆಗೆ ತಿರುಗಿಸಲು ಬಂಧನದ ನಂತರವೂ ಆಕೆ ಆತ್ಮಹತ್ಯೆಯ ನಾಟಕವಾಡಿದ್ದಳು ಎಂದು ಕೋರ್ಟ್ ಹೇಳಿದೆ. ಪ್ರಾಸಿಕ್ಯೂಟರ್ ಪ್ರಕಾರ, ಆ ಯುವತಿಯ ಕೃತ್ಯಗಳು ಸಮಾಜಕ್ಕೆ ಹಾನಿಕಾರಕ ಸಂದೇಶವನ್ನು ರವಾನಿಸಿದ್ದವು ಮತ್ತು ಪ್ರೀತಿಯ ಪಾವಿತ್ರ‍್ಯವನ್ನು ಹಾಳು ಮಾಡಿದೆ ಎಂದು ಕೋರ್ಟ್ ತೀರ್ಪು ನೀಡಿದೆ.

2022ರ ಅ. 25ರಂದು ಶರೋನ್ ರಾಜ್ ವಿಷಪೂರಿತ ಜ್ಯೂಸ್ ಸೇವಿಸಿದ ಬಳಿಕ ಆತನ ಆರೋಗ್ಯ ಹದಗೆಟ್ಟಿತ್ತು. ಇದಾದ 11 ದಿನಗಳ ನಂತರ, ಅವರು ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು.

ಗ್ರೀಷ್ಮಾಗೆ ನಾಗರಕೋಯಿಲ್‌ನ ಸೇನಾ ಸಿಬ್ಬಂದಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ಆಕೆ ತನ್ನ ಪ್ರೇಮಿಯಾಗಿದ್ದ ಶರೋನ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಆತನನ್ನು ತನ್ನ ಜೀವನದಿಂದ ದೂರವಿಡಲು ಪ್ರಯತ್ನಿಸಿದ್ದಳು. ಇದಕ್ಕೆ ಶರೋನ್ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಗ್ರೀಷ್ಮಾ ಶರೋನ್ ಕೊಲೆಗೆ ಸಂಚು ರೂಪಿಸಿದ್ದು, ಆತನನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಶರೋನ್‌ಗೆ ಆಯುರ್ವೇದಿಕ್ ಕೀಟನಾಶಕ ಬೆರೆಸಿದ ಜ್ಯೂಸ್ ನೀಡಿದ್ದಳು. ಇದರಿಂದಾಗಿ ಶರೋನ್ ಅನಾರೋಗ್ಯಕ್ಕೀಡಾಗಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago