Featured

ಕೇರಳ ಶರೋನ್ ರಾಜ್ ಕೊಲೆ ಪ್ರಕರಣ :ಅಪರಾಧಿ ಪ್ರೇಯಸಿಗೆ ಮರಣದಂಡನೆ ಶಿಕ್ಷೆ  – vishwanews24

ಕೇರಳ  ಶರೋನ್ ರಾಜ್ ಕೊಲೆ ಪ್ರಕರಣ :ಅಪರಾಧಿ ಪ್ರೇಯಸಿಗೆ ಮರಣದಂಡನೆ ಶಿಕ್ಷೆ

ತಿರುವನಂತಪುರಂ: ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಹೇಳಿಕೆಯನ್ನು ಕೋರ್ಟ್ ತಿರಸ್ಕರಿಸಿತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಆಕೆಯ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೆ 3 ವರ್ಷಗಳ ಜೈಲು ಶಿಕ್ಷೆಯನ್ನು ಕೂಡ ವಿಧಿಸಿ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ.

ಇನ್ನು 24 ವರ್ಷದ ಅಪರಾಧಿ ಗ್ರೀಷ್ಮಾ ಮರಣದಂಡನೆ ಶಿಕ್ಷೆ ಅನುಭವಿಸಿದ ಭಾರತದ ಅತ್ಯಂತ ಕಿರಿಯ ಯುವತಿಯಾಗಿದ್ದಾಳೆ. ತನ್ನ ಶೈಕ್ಷಣಿಕ ಸಾಧನೆಗಳು, ಹಿಂದೆ ಯಾವುದೇ ಅಪರಾಧ ಮಾಡಿಲ್ಲ ಮತ್ತು ತಾನು ತನ್ನ ಹೆತ್ತವರ ಏಕೈಕ ಮಗಳು ಎಂಬ ಅಂಶವನ್ನು ಉಲ್ಲೇಖಿಸಿ ಆಕೆ ಶಿಕ್ಷೆಯಲ್ಲಿ ಸಡಿಲಿಕೆಗೊಳಿಸುವಂತೆ ಕೋರ್ಟ್ ಮೊರೆ ಹೋಗಿದ್ದಳು. ಆದರೆ, 586 ಪುಟಗಳ ತೀರ್ಪಿನಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸಿ ಈ ಬಗ್ಗೆ ಗಮನಹರಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಗ್ರೀಷ್ಮಾ ಹಂತ ಹಂತವಾಗಿ ಈ ಕೃತ್ಯ ಎಸಗಲು ಸಂಚು ರೂಪಿಸಿದ್ದಳು. ಆಕೆಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎನ್ನಲು ಸಾಧ್ಯವಿಲ್ಲ. ಏಕೆಂದರೆ ಆಕೆ ಈ ಮೊದಲು ಕೂಡ ಯುವಕನನ್ನು ಕೊಲೆ ಮಾಡಲು ಯತ್ನಿಸಿದ್ದಳು. ತನಿಖೆಯನ್ನು ಬೇರೆಡೆಗೆ ತಿರುಗಿಸಲು ಬಂಧನದ ನಂತರವೂ ಆಕೆ ಆತ್ಮಹತ್ಯೆಯ ನಾಟಕವಾಡಿದ್ದಳು ಎಂದು ಕೋರ್ಟ್ ಹೇಳಿದೆ. ಪ್ರಾಸಿಕ್ಯೂಟರ್ ಪ್ರಕಾರ, ಆ ಯುವತಿಯ ಕೃತ್ಯಗಳು ಸಮಾಜಕ್ಕೆ ಹಾನಿಕಾರಕ ಸಂದೇಶವನ್ನು ರವಾನಿಸಿದ್ದವು ಮತ್ತು ಪ್ರೀತಿಯ ಪಾವಿತ್ರ‍್ಯವನ್ನು ಹಾಳು ಮಾಡಿದೆ ಎಂದು ಕೋರ್ಟ್ ತೀರ್ಪು ನೀಡಿದೆ.

2022ರ ಅ. 25ರಂದು ಶರೋನ್ ರಾಜ್ ವಿಷಪೂರಿತ ಜ್ಯೂಸ್ ಸೇವಿಸಿದ ಬಳಿಕ ಆತನ ಆರೋಗ್ಯ ಹದಗೆಟ್ಟಿತ್ತು. ಇದಾದ 11 ದಿನಗಳ ನಂತರ, ಅವರು ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು.

ಗ್ರೀಷ್ಮಾಗೆ ನಾಗರಕೋಯಿಲ್‌ನ ಸೇನಾ ಸಿಬ್ಬಂದಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ಆಕೆ ತನ್ನ ಪ್ರೇಮಿಯಾಗಿದ್ದ ಶರೋನ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಆತನನ್ನು ತನ್ನ ಜೀವನದಿಂದ ದೂರವಿಡಲು ಪ್ರಯತ್ನಿಸಿದ್ದಳು. ಇದಕ್ಕೆ ಶರೋನ್ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಗ್ರೀಷ್ಮಾ ಶರೋನ್ ಕೊಲೆಗೆ ಸಂಚು ರೂಪಿಸಿದ್ದು, ಆತನನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಶರೋನ್‌ಗೆ ಆಯುರ್ವೇದಿಕ್ ಕೀಟನಾಶಕ ಬೆರೆಸಿದ ಜ್ಯೂಸ್ ನೀಡಿದ್ದಳು. ಇದರಿಂದಾಗಿ ಶರೋನ್ ಅನಾರೋಗ್ಯಕ್ಕೀಡಾಗಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago