ಬೆಂಗಳೂರು: ಕೇರಳ ಸರ್ಕಾರ ಹಾಡಹಗಲೇ ಹಿಂದೂಗಳ ಮೇಲೆ ಅತ್ಯಾಚಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಆರೋಪಿದ್ದಾರೆ.
ಕೇರಳ ರಾಜ್ಯ ಸರ್ಕಾರವು ಶಬರಿಮಲೆ ವಿವಾದವನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಹಿಂದೂಗಳ ಮೇಲೆ ಹಾಡಹಗಲೇ ‘ಅತ್ಯಾಚಾರ’ ನಡೆಸಿದೆ ಎಂದು ಅವರು ಹೇಳಿದ್ದಾರೆ. “ಜನಸಾಮಾನ್ಯರ ನಂಬಿಕೆಯನ್ನು ನೋಯಿಸದೆ ಕೇರಳ ಸರ್ಕಾರವು ರಾಜತಾಂತ್ರಿಕವಾಗಿ ಅದನ್ನು ನಿರ್ವಹಿಸಲು ಸಂಪೂರ್ಣವಾಗಿ ವಿಫಲವಾಗಿದೆ, ಈ ಮೂಲಕ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲು ಅತ್ಯಾಚಾರ ನಡೆಸಿದೆ” ಎಂದು ಹೇಳಿಕೆ ನೀಡಿದ್ದಾರೆ.ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜಾವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕು. ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ ಎಂದು ಕಟು ಪದಗಳಿಂದ ಕೇರಳ ಸರ್ಕಾರದ ನಡೆಯನ್ನು ಅನಂತ್ ಕುಮಾರ್ ಹೆಗ್ಡೆ ಟೀಕಿಸಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…