ಬೆಂಗಳೂರು: ಕೇರಳ ಸರ್ಕಾರ ಹಾಡಹಗಲೇ ಹಿಂದೂಗಳ ಮೇಲೆ ಅತ್ಯಾಚಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಆರೋಪಿದ್ದಾರೆ.
ಕೇರಳ ರಾಜ್ಯ ಸರ್ಕಾರವು ಶಬರಿಮಲೆ ವಿವಾದವನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಹಿಂದೂಗಳ ಮೇಲೆ ಹಾಡಹಗಲೇ ‘ಅತ್ಯಾಚಾರ’ ನಡೆಸಿದೆ ಎಂದು ಅವರು ಹೇಳಿದ್ದಾರೆ. “ಜನಸಾಮಾನ್ಯರ ನಂಬಿಕೆಯನ್ನು ನೋಯಿಸದೆ ಕೇರಳ ಸರ್ಕಾರವು ರಾಜತಾಂತ್ರಿಕವಾಗಿ ಅದನ್ನು ನಿರ್ವಹಿಸಲು ಸಂಪೂರ್ಣವಾಗಿ ವಿಫಲವಾಗಿದೆ, ಈ ಮೂಲಕ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲು ಅತ್ಯಾಚಾರ ನಡೆಸಿದೆ” ಎಂದು ಹೇಳಿಕೆ ನೀಡಿದ್ದಾರೆ.ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜಾವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕು. ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ ಎಂದು ಕಟು ಪದಗಳಿಂದ ಕೇರಳ ಸರ್ಕಾರದ ನಡೆಯನ್ನು ಅನಂತ್ ಕುಮಾರ್ ಹೆಗ್ಡೆ ಟೀಕಿಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…