ಬೆಂಗಳೂರು: ಕೇರಳ ಸರ್ಕಾರ ಹಾಡಹಗಲೇ ಹಿಂದೂಗಳ ಮೇಲೆ ಅತ್ಯಾಚಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಆರೋಪಿದ್ದಾರೆ.
ಕೇರಳ ರಾಜ್ಯ ಸರ್ಕಾರವು ಶಬರಿಮಲೆ ವಿವಾದವನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಹಿಂದೂಗಳ ಮೇಲೆ ಹಾಡಹಗಲೇ ‘ಅತ್ಯಾಚಾರ’ ನಡೆಸಿದೆ ಎಂದು ಅವರು ಹೇಳಿದ್ದಾರೆ. “ಜನಸಾಮಾನ್ಯರ ನಂಬಿಕೆಯನ್ನು ನೋಯಿಸದೆ ಕೇರಳ ಸರ್ಕಾರವು ರಾಜತಾಂತ್ರಿಕವಾಗಿ ಅದನ್ನು ನಿರ್ವಹಿಸಲು ಸಂಪೂರ್ಣವಾಗಿ ವಿಫಲವಾಗಿದೆ, ಈ ಮೂಲಕ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲು ಅತ್ಯಾಚಾರ ನಡೆಸಿದೆ” ಎಂದು ಹೇಳಿಕೆ ನೀಡಿದ್ದಾರೆ.ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜಾವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕು. ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ ಎಂದು ಕಟು ಪದಗಳಿಂದ ಕೇರಳ ಸರ್ಕಾರದ ನಡೆಯನ್ನು ಅನಂತ್ ಕುಮಾರ್ ಹೆಗ್ಡೆ ಟೀಕಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…