Featured

ಕೇರಳ ಸ್ಟೋರಿಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು : ಕುಯಿಲಾಡಿ – Vishwanews24

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನ: ಕುಯಿಲಾಡಿ

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಕುಯಿಲಾಡಿ ಈಗಾಗಲೇ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಈ ಸಂಬಂಧವಾಗಿ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದು, ಇದರಿಂದ ಪ್ರಕರಣದ ನಿಖರತೆ ಸಾಬೀತಾಗಿದೆ. ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಸಮಾಜಘಾತುಕ ಶಕ್ತಿಗಳಿಗೆ ನೀಡುವ ಕುಕೃತ್ಯದ ಯೋಜನೆಯ ಮೂಲಕ ಅವರ ಭವಿಷ್ಯವನ್ನು ಹಾಳುಗೆಡಹಲು ರೂಪಿಸಿರುವ ಈ ಹುನ್ನಾರ ಅತ್ಯಂತ ಖಂಡನೀಯ ಎಂದರು.

ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಬಗ್ಗೆ ಗುಮಾನಿ ಇದೆ. ಮೂರು ಮಂದಿ ತಪ್ಪಿತಸ್ಥ ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದ ವೀಡಿಯೋಗಳನ್ನು ಡಿಲೀಟ್ ಮಾಡಲಾಗಿದೆ ಹಾಗೂ ಈ ಪ್ರಕರಣದಲ್ಲಿ ಇಬ್ಬರು ಯುವಕರು ಕೂಡಾ ಶಾಮೀಲಾಗಿದ್ದಾರೆ ಎಂಬ ವಿಚಾರವನ್ನು ಸಂತ್ರಸ್ತ ವಿದ್ಯಾರ್ಥಿನಿಯರು ಬಹಿರಂಗಪಡಿಸಿರುವುದಾಗಿ ತಿಳಿದುಬಂದಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ತನಿಖೆಯ ದಾರಿ ತಪ್ಪಿಸುವ ಅಥವಾ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದರೆ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪ್ರಕರಣದ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸೇರಿ ನ್ಯಾಯಕ್ಕಾಗಿ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದರು.

ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಈ ಪ್ರಕರಣವನ್ನು ಹಳ್ಳ ಹಿಡಿಸುವ ಪ್ರಯತ್ನ ಮಾಡಿದಲ್ಲಿ ಅದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago