Featured

ಕೇರಳ ಸ್ಟೋರಿಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು : ಕುಯಿಲಾಡಿ – Vishwanews24

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನ: ಕುಯಿಲಾಡಿ

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಕುಯಿಲಾಡಿ ಈಗಾಗಲೇ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಈ ಸಂಬಂಧವಾಗಿ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದು, ಇದರಿಂದ ಪ್ರಕರಣದ ನಿಖರತೆ ಸಾಬೀತಾಗಿದೆ. ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಸಮಾಜಘಾತುಕ ಶಕ್ತಿಗಳಿಗೆ ನೀಡುವ ಕುಕೃತ್ಯದ ಯೋಜನೆಯ ಮೂಲಕ ಅವರ ಭವಿಷ್ಯವನ್ನು ಹಾಳುಗೆಡಹಲು ರೂಪಿಸಿರುವ ಈ ಹುನ್ನಾರ ಅತ್ಯಂತ ಖಂಡನೀಯ ಎಂದರು.

ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಬಗ್ಗೆ ಗುಮಾನಿ ಇದೆ. ಮೂರು ಮಂದಿ ತಪ್ಪಿತಸ್ಥ ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದ ವೀಡಿಯೋಗಳನ್ನು ಡಿಲೀಟ್ ಮಾಡಲಾಗಿದೆ ಹಾಗೂ ಈ ಪ್ರಕರಣದಲ್ಲಿ ಇಬ್ಬರು ಯುವಕರು ಕೂಡಾ ಶಾಮೀಲಾಗಿದ್ದಾರೆ ಎಂಬ ವಿಚಾರವನ್ನು ಸಂತ್ರಸ್ತ ವಿದ್ಯಾರ್ಥಿನಿಯರು ಬಹಿರಂಗಪಡಿಸಿರುವುದಾಗಿ ತಿಳಿದುಬಂದಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ತನಿಖೆಯ ದಾರಿ ತಪ್ಪಿಸುವ ಅಥವಾ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದರೆ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪ್ರಕರಣದ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸೇರಿ ನ್ಯಾಯಕ್ಕಾಗಿ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದರು.

ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಈ ಪ್ರಕರಣವನ್ನು ಹಳ್ಳ ಹಿಡಿಸುವ ಪ್ರಯತ್ನ ಮಾಡಿದಲ್ಲಿ ಅದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago