Featured

ಕೇರಳ : ಹಕ್ಕಿ ಜ್ವರ ಹೆಚ್ಚಳ : ನೂರಾರು ಕೋಳಿಗಳ ಮಾರಣಹೋಮ – Vishwanews24

ಕೇರಳ : ಹಕ್ಕಿ ಜ್ವರ ಹೆಚ್ಚಳ : ನೂರಾರು ಕೋಳಿಗಳ ಮಾರಣಹೋಮ

ಕೇರಳ : ಡೆಡ್ಲಿ ಕೊರೊನಾ ರಣಕೇಕೆ ನಿಂತ ಬೆನ್ನಲ್ಲೆ ಇದೀಗ ಕೇರಳದ ಕೋಟಯಂನಲ್ಲಿ ಹಕ್ಕಿ ಜ್ವರದ ರಣಕೇಕೆ ಹೆಚ್ಚಳಗೊಂಡಿದ್ದು ಮತ್ತಷ್ಟು ಆತಂಕ ಮನೆ ಮಾಡಿದೆ.

ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ ಜ್ವರ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯಾಧಿಕಾರಿಗಳು ಭರವಸೆ ನೀಡಿದ್ದಾರೆ.

ಬಾತುಕೋಳಿಗಳು ವಾಸಿಸುವ ಕೊಳಗಳ ಸುತ್ತ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿದ್ದು, ಈ ಕಾರಣದಿಂದ ಈ ಭಾಗದಲ್ಲಿ ಸಾಕು ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ. ಈ ಪ್ರದೇಶದಿಂದ ಬೇರೆ ರೋಗ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಕೋಳಿ ಸಾಕಾಣಿಕೆದಾರರಿಗೂ ಇದ್ರಿಂದ ಬಿಸಿ ತಟ್ಟುವ ಸಾಧ್ಯತೆಯಿದ್ದು, ಮಾರಾಟಕ್ಕೂ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆಗಳಿವೆ ಎಂದು ಮಾಹಿತಿ ಬಹಿರಂಗವಾಗಿದೆ.

ಸ್ಥಳೀಯ ಜಿಲ್ಲೆಗಳಲ್ಲೂ ಕೂಡಲೇ ಕೊರೊನಾ ಮಾತ್ರವಲ್ಲ ಇದೀಗ ಕಾಡುವ ಹಕ್ಕಿ ಜ್ವರಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

2 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

2 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

2 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

2 days ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 days ago