ಕೇರಳ : ಡೆಡ್ಲಿ ಕೊರೊನಾ ರಣಕೇಕೆ ನಿಂತ ಬೆನ್ನಲ್ಲೆ ಇದೀಗ ಕೇರಳದ ಕೋಟಯಂನಲ್ಲಿ ಹಕ್ಕಿ ಜ್ವರದ ರಣಕೇಕೆ ಹೆಚ್ಚಳಗೊಂಡಿದ್ದು ಮತ್ತಷ್ಟು ಆತಂಕ ಮನೆ ಮಾಡಿದೆ.
ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ ಜ್ವರ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯಾಧಿಕಾರಿಗಳು ಭರವಸೆ ನೀಡಿದ್ದಾರೆ.
ಬಾತುಕೋಳಿಗಳು ವಾಸಿಸುವ ಕೊಳಗಳ ಸುತ್ತ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿದ್ದು, ಈ ಕಾರಣದಿಂದ ಈ ಭಾಗದಲ್ಲಿ ಸಾಕು ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ. ಈ ಪ್ರದೇಶದಿಂದ ಬೇರೆ ರೋಗ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಕೋಳಿ ಸಾಕಾಣಿಕೆದಾರರಿಗೂ ಇದ್ರಿಂದ ಬಿಸಿ ತಟ್ಟುವ ಸಾಧ್ಯತೆಯಿದ್ದು, ಮಾರಾಟಕ್ಕೂ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆಗಳಿವೆ ಎಂದು ಮಾಹಿತಿ ಬಹಿರಂಗವಾಗಿದೆ.
ಸ್ಥಳೀಯ ಜಿಲ್ಲೆಗಳಲ್ಲೂ ಕೂಡಲೇ ಕೊರೊನಾ ಮಾತ್ರವಲ್ಲ ಇದೀಗ ಕಾಡುವ ಹಕ್ಕಿ ಜ್ವರಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…