Featured

ಮಂಗಳೂರು : ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24

ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24

ಮಂಗಳೂರು,: ”ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೋಗಲಕ್ಷಣವಿದ್ದು ಗಡಿ ದಾಟುವವರ ಬಗ್ಗೆ ಜಾಗರೂಕರಾಗಿರಲು ಮಾರ್ಚ್ 13 ರ ಶನಿವಾರದಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚಿಸಲು ನಿರ್ಧರಿಸಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹೇಳಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ”ಅಧಿಕೃತ ಮಟ್ಟದ ಸಭೆಯಲ್ಲಿ ಗ್ರಾಮ ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಮಿತಿಗಳನ್ನು ರಚಿಸಲು ಸೂಚನೆಗಳನ್ನು ನೀಡಲಾಗಿದೆ ಪ್ರದೇಶದಲ್ಲಿ ಗಸ್ತು ತಿರುಗಲು ಈ ಸಮಿತಿಗಳಿಗೆ ತಿಳಿಸಲಾಗಿದೆ. ಕೇರಳದಲ್ಲಿ ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆ ಗಡಿಯಲ್ಲಿ ಸುರಕ್ಷತೆ ಅತೀ ಮುಖ್ಯ” ಎಂದು ಅವರು ಹೇಳಿದರು.

ಉಡುಪಿ : ವಿದ್ಯೋದಯ ಪ.ಪೂ.ಕಾಲೇಜು : ಜೆ.ಇ.ಇ. ಮೈನ್ಸ್ ಸಾಧನೆ -Vishwanews24

“ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರು ಕೊರೊನಾ ನೆಗೆಟಿವ್‌ ವರದಿ ತರಬೇಕು. ಅವರು ಗಡಿಗಳಿಗೆ ಬಂದು ಅಲ್ಲಿ ಕೇಂದ್ರಗಳಲ್ಲಿ ಪರೀಕ್ಷೆಗೆ ಒಳಪಡಬಹುದು. ಗಡಿ ದಾಟಲು ಯಾವುದೇ ತಡೆ ಇಲ್ಲದಿದ್ದರೂ, ತಪಾಸಣೆ ನಡೆಸಲಾಗುತ್ತಿದೆ. ಕೇರಳದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದರು, ಉಭಯ ಜಿಲ್ಲೆಗಳ ದೈನಂದಿನ ಸಂಚಾರ ನಡೆಸುವವರ ಹಿತದೃಷ್ಟಿಯಿಂದ ಇನ್ನೂ ನಾಲ್ಕು ಗಡಿ ರಸ್ತೆಗಳನ್ನು ತೆರೆಯಲು ನಿರ್ಧರಿಸಲಾಗಿದೆ” ಎಂದು ಕೂಡಾ ಜಿಲ್ಲಾಧಿಕಾರಿ ತಿಳಿಸಿ‌ದ್ದಾರೆ.

”ದೈನಂದಿನ ಕೊರೊನಾ ಪರೀಕ್ಷೆಗಳ ಸಂಖ್ಯೆ 4,000 ಕ್ಕೆ ಏರಿದೆ. ಈ ಹಿನ್ನೆಲೆ ವೆನ್ಲಾಕ್ ಆಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಮತ್ತು ಲ್ಯಾಬ್ ತಂತ್ರಜ್ಞರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದೆ. ಇಲ್ಲಿರುವ ವಿಮಾನ ನಿಲ್ದಾಣದಲ್ಲಿ ಸ್ವ್ಯಾಬ್ ಪರೀಕ್ಷಾ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು ಅದು 24 ಗಂಟೆಗಳಲ್ಲೂ ವರದಿ ನೀಡುತ್ತದೆ. ಕೇರಳ ಪ್ರಯಾಣಿಕರಿಗೆ ಇದು ಸಹಕಾರಿಯಾಗಲಿದೆ” ಎಂದರು.

ಮಂಗಳೂರು : ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago