Featured

ಕೇವಲ 370 ನೇ ವಿಧಿ ಅಲ್ಲ, ಪಿಒಕೆ ಒಳಗೆ ಪ್ರವೇಶ ಮಾಡ್ತೇವೆ, ರಾಮಮಂದಿರವನ್ನೂ ಕಟ್ಟುತ್ತೇವೆ : ಶಾಸಕ ಸುನಿಲ್ ಕುಮಾರ್ -Vishwanews24

ಉಡುಪಿ : ಕೇಂದ್ರ ಸರಕಾರದ ನಿಲುವು ವಿರೋಧಿಸಿ ರಾಜೀನಾಮೆ ನೀಡಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ರಾಜಿನಾಮೆ ಕೊಟ್ಟಿದ್ದೀರಿ,ಮುಂದೆ ನಿಮ್ಮಂತವರು ಆತ್ಮಹತ್ಯೆ ಯನ್ನೂ ಕೂಡ ಮಾಡಿಕೊಳ್ಳುವ ಸನ್ನಿವೇಶ ಬರಬಹುದು ಎಂದು ಕಿಡಿಕಾರಿದರು.

ಉಡುಪಿಯಲ್ಲಿ ನಡೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು ಕಾಶ್ಮೀರ, ರಾಮಮಂದಿರ ವಿಚಾರದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ಅಸಮಾಧಾನವಂತೆ. ಈ ಜಿಲ್ಲಾಧಿಕಾರಿ ಮತ್ತು ಅದೇ ಮಾನಸಿಕತೆ ಇರುವವರಿಗೆ ನಾವು ಎಚ್ಚರಿಕೆ ನೀಡುತ್ತಿದ್ದು, ಕೇವಲ 370 ನೇ ವಿಧಿ ಅಲ್ಲ, ಪಿಒಕೆ ಒಳಗೆ ಪ್ರವೇಶ ಮಾಡ್ತೇವೆ, ರಾಮಮಂದಿರವನ್ನೂ ಕಟ್ತೇವೆ ಎಂದು ಹೇಳಿದರು.

ಕಾಶ್ಮೀರದ ಕುರಿತಂತೆ, ರಾಮಮಂದಿರದ ಕುರಿತಂತೆ ನಮ್ಮ ಪಕ್ಷದ ನಿಲುವು ಬದಲಾಗಿಲ್ಲ. ಬದಲಾಗುವುದೂ ಇಲ್ಲ. ಜಗತ್ತು ಭಾರತದ ಆಡಳಿತವನ್ನು‌ ಒಪ್ಪಿಕೊಳ್ಳುತ್ತದೆ. ಭಾರತದ ನಾಗರಿಕರು ಮೋದಿಯವರ ಕೆಲಸ ಮೆಚ್ಚಿದ್ದಾರೆ. ಯಾರೋ ಒಬ್ಬ ಜಿಲ್ಲಾಧಿಕಾರಿ ವಿರೋಧಿಸಿ ರಾಜೀನಾಮೆ ಕೊಡ್ತಾರೆ. ಅದಕ್ಕೆ ನಾವೇನೂ ಮಾಡಲಾಗದು. ಪ್ರಧಾನಿ ಮೋದಿ ಸರ್ಕಾರ ಭಾರತದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆ” ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago