ಉಡುಪಿ : ಕೇಂದ್ರ ಸರಕಾರದ ನಿಲುವು ವಿರೋಧಿಸಿ ರಾಜೀನಾಮೆ ನೀಡಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ರಾಜಿನಾಮೆ ಕೊಟ್ಟಿದ್ದೀರಿ,ಮುಂದೆ ನಿಮ್ಮಂತವರು ಆತ್ಮಹತ್ಯೆ ಯನ್ನೂ ಕೂಡ ಮಾಡಿಕೊಳ್ಳುವ ಸನ್ನಿವೇಶ ಬರಬಹುದು ಎಂದು ಕಿಡಿಕಾರಿದರು.
ಉಡುಪಿಯಲ್ಲಿ ನಡೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು ಕಾಶ್ಮೀರ, ರಾಮಮಂದಿರ ವಿಚಾರದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ಅಸಮಾಧಾನವಂತೆ. ಈ ಜಿಲ್ಲಾಧಿಕಾರಿ ಮತ್ತು ಅದೇ ಮಾನಸಿಕತೆ ಇರುವವರಿಗೆ ನಾವು ಎಚ್ಚರಿಕೆ ನೀಡುತ್ತಿದ್ದು, ಕೇವಲ 370 ನೇ ವಿಧಿ ಅಲ್ಲ, ಪಿಒಕೆ ಒಳಗೆ ಪ್ರವೇಶ ಮಾಡ್ತೇವೆ, ರಾಮಮಂದಿರವನ್ನೂ ಕಟ್ತೇವೆ ಎಂದು ಹೇಳಿದರು.
ಕಾಶ್ಮೀರದ ಕುರಿತಂತೆ, ರಾಮಮಂದಿರದ ಕುರಿತಂತೆ ನಮ್ಮ ಪಕ್ಷದ ನಿಲುವು ಬದಲಾಗಿಲ್ಲ. ಬದಲಾಗುವುದೂ ಇಲ್ಲ. ಜಗತ್ತು ಭಾರತದ ಆಡಳಿತವನ್ನು ಒಪ್ಪಿಕೊಳ್ಳುತ್ತದೆ. ಭಾರತದ ನಾಗರಿಕರು ಮೋದಿಯವರ ಕೆಲಸ ಮೆಚ್ಚಿದ್ದಾರೆ. ಯಾರೋ ಒಬ್ಬ ಜಿಲ್ಲಾಧಿಕಾರಿ ವಿರೋಧಿಸಿ ರಾಜೀನಾಮೆ ಕೊಡ್ತಾರೆ. ಅದಕ್ಕೆ ನಾವೇನೂ ಮಾಡಲಾಗದು. ಪ್ರಧಾನಿ ಮೋದಿ ಸರ್ಕಾರ ಭಾರತದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆ” ಎಂದು ಹೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…