Featured

ಕೇಸರಿ ಬಗ್ಗೆ ನಿಮಗೆ ಜಿಗುಪ್ಸೆ ಏಕೆ? ಅದನ್ನ ಕಂಡರೆ ಯಾಕೆ ವಿಚಲಿತರಾಗುತ್ತೀರಿ? ಗೊಂದಲಕ್ಕೆ ಒಳಗಾಗುತ್ತೀರಿ? : ಸಿದ್ದರಾಮಯ್ಯ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ – Vishwanews24

ಕೇಸರಿ ಬಗ್ಗೆ ನಿಮಗೆ ಜಿಗುಪ್ಸೆ ಏಕೆ? ಅದನ್ನ ಕಂಡರೆ ಯಾಕೆ ವಿಚಲಿತರಾಗುತ್ತೀರಿ? ಗೊಂದಲಕ್ಕೆ ಒಳಗಾಗುತ್ತೀರಿ? : ಸಿದ್ದರಾಮಯ್ಯ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ – Vishwanews24

ಬೆಂಗಳೂರು: ಸಿದ್ದರಾಮಯ್ಯ ಘನತೆ ಗೌರವ ಬಿಟ್ಟು ಅಸಭ್ಯವಾಗಿ ಮಾತನಾಡುವ ಅಭ್ಯಾಸ ಮಾಡ್ಕೊಂಡಿದಾರೆ. ಯಾವುದೇ ಟೀಕೆ ಎಲ್ಲೆ ಮೀರಬಾರದು. ಆದರೆ, ಇತ್ತೀಚೆಗೆ ಕನ್ನಡದ ಸಂಸ್ಕೃತಿಗೆ ತಕ್ಕಂತೆ ಅವರ ಮಾತುಗಳು ಇಲ್ಲ ಎಂದು ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಆರ್‌ಎಸ್ಎಸ್‌ನಿಂದ ಹಿಡಿದು ನರೇಂದ್ರ ಮೋದಿ ಅವರಿಗೆ ಏಕವಚನ ಬಳಸುವವರೆಗೆ ಕೆಳಮಟ್ಟಕ್ಕೆ ಇಳಿದಿದ್ದಾರೆ. ಅಸಹಾಯಕರಾಗಿ ಹೀಗೆ ಮಾತನಾಡುತ್ತಿದ್ದೀರೋ? ಸಂಸ್ಕಾರದ ಕೊರತೆ ಆಗಿ ಹೀಗೆಲ್ಲ ಮಾತನಾಡುತ್ತಿದ್ದೀರಾ? ರಾಷ್ಟ್ರೀಯ ನಾಯಕರನ್ನು ಮೆಚ್ಚಿಸಲಾ? ಸಕಾರಾತ್ಮಕ ಟೀಕೆ ಮೂಲಕ ಸರ್ಕಾರನ ಎಚ್ಚೆರಿಸುವುದು ವಿಪಕ್ಷದ ಕೆಲಸ. ಹಾಗಂತ ಆರ್‌ಎಸ್ಎಸ್‌ ಅನ್ನು ಜರಿಯುವುದಿಲ್ಲ. ಅದರಿಂದಲೇ ಬೆಳೆದವರು ನಾವು ಎಂದರು.
ಸಂಸ್ಕಾರ, ದೇಶಭಕ್ತಿ, ವ್ಯಕ್ತಿ ನಿರ್ಮಾಣವನ್ನು ಆರ್‌ಎಸ್ಎಸ್‌ ಮಾಡುತ್ತದೆ. ಈ ವಿಷಯದಲ್ಲಿ ಮಾಹಿತಿ, ಜ್ಞಾನದ ಕೊರತೆ ನಿಮಗೆ ಇದ್ದಂತೆ ಇದೆ. ನಿಮಗೆ ಸಲಹೆ ಕೊಡುತ್ತಿರುವವರಿಗೆ ಅನುಭವದ ಕೊರತೆ ಇದೆ ಅನಿಸುತ್ತದೆ ಎಂದರು.

ಅನುಭವಿಗಳು ಮತ್ತು ಉತ್ತಮರ ಸಹವಾಸ ಮಾಡಿ ಎಂದು ಕಿವಿ ಮಾತು ಹೇಳಿದ ಅವರು, ಜಗತ್ತಿನ ನಾಯಕರು ಮೋದಿಯವರನ್ನು ಮೆಚ್ಚಿಕೊಂಡಿದ್ದಾರೆ. ಎಚ್ಚರಿಕೆಯಿಂದ ಮಾತನಾಡುವುದು ಹಿರಿತನಕ್ಕೆ ಒಳಿತು ಎಂದು ಕುಟುಕಿದರು.

ನಾನು ನಿಮ್ಮ ಸಮಕಾಲೀನರಲ್ಲ. ಹಿರಿಯರಿಂದ ಕಲಿಯಬೇಕೆಂದು ರಾಜಕಾರಣಕ್ಕೆ ಬಂದೆವು. ನಿಮ್ಮಲ್ಲಿ ನೋಡಿ ಕಲಿಯುವಂತಹ ಗುಣ ಕಡಿಮೆ ಆಗುತ್ತಿದೆ ಎಂದರು.

ಕೇಸರಿ ಬಗ್ಗೆ ನಿಮಗೆ ಜಿಗುಪ್ಸೆ ಏಕೆ? ಅದು ತ್ಯಾಗದ ಸಂಕೇತ, ರಾಷ್ಟ್ರೀಯತೆಯನ್ನು ಬಿಂಬಿಸುತ್ತದೆ. ಯಾಕೆ ಕೇಸರಿ ಕಂಡರೆ ವಿಚಲಿತರಾಗುತ್ತೀರಿ? ಗೊಂದಲಕ್ಕೆ ಒಳಗಾಗುತ್ತೀರಿ? ಎಂದು ಪ್ರಶ್ನಿಸಿದರು. ಮುಂದುವರಿದು, ಸಿಎಂ ಆಗಿದ್ದಾಗ ಕುಂಕುಮ ಇಟ್ಟ ಕಾರ್ಯಕರ್ತರನ್ನು ದೂರ ಇಟ್ಟಿರಿ. ಭಾರತ ತ್ಯಾಗದ ಸಂಕೇತ, ಕೇಸರಿ ಕೂಡ ತ್ಯಾಗದ ಸಂಕೇತ. ಎರಡೂ ಒಂದನ್ನೊಂದು ಬಿಟ್ಟಿಲ್ಲ ಎಂದು ಹೇಳಿದರು.

ವಿಜಯ ದಶಮಿಯಂದು ಆಯುಧ ಪೂಜೆ ಮಾಡುವುದು ಈ ನಾಡಿನ ಪರಂಪರೆ. ಆಗ ಕೇಸರಿ ಶಾಲು ಹಾಕಿದ್ದನ್ನ ಟೀಕಿಸುವ ನಿಮಗೇಕೆ ಸಹಿಸಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಇರುವಾಗಷ್ಟೇ ಸರ್ಕಾರಿ ನೌಕರರು ಪೂಜೆ ಮಾಡಿಲ್ಲ. ಅವರು ಕರ್ತವ್ಯ ಮಾಡುವಾಗ ಹಾಕಿದ್ದಲ್ಲ, ಪೂಜೆ ಮಾಡುವಾಗ ಹಾಕಿದ್ದು. ಯಾರೇ ಕೇಸರಿ ಶಾಲು ಹಾಕಿದರೂ ಬೆಂಬಲಿಸುತ್ತೇನೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago