Featured

ಕೈಕೊಟ್ಟ ಪ್ರಿಯಕರ : ಮದುವೆ  ದಿನವೇ ಆತನ ಮೇಲೆ  ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ – vishwanews24

ಕೈಕೊಟ್ಟ ಪ್ರಿಯಕರ : ಮದುವೆ  ದಿನವೇ ಆತನ ಮೇಲೆ  ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ

ಅಮರಾವತಿ:  ಇಲ್ಲೊಬ್ಬಳು ವಿಧವೆ ತನ್ನ ಪ್ರಿಯಕರ  ಕೈಕೊಟ್ಟಿದ್ದಕ್ಕಾಗಿ ಅವನ ಮೇಲೆ ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ.

44 ವರ್ಷದ ವಿಧವೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆ  ದಿನವೇ ಆತನ ಮೇಲೆ ಆಸಿಡ್‌ ದಾಳಿಗೆ ಯತ್ನಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ  ನಂಡಲೂರಿನಲ್ಲಿ ನಡೆದಿದೆ. ಘಟನೆ ನಂತರ ಯುವಕನ ವಿವಾಹ ಕಾರ್ಯಕ್ರಮ ರದ್ದಾಗಿದೆ. ಆಸಿಡ್‌ ದಾಳಿ  ನಡೆಸಿದ ಆರೋಪಿ ಮಹಿಳೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಯಾ. ಈಕೆಗೆ 22 ವರ್ಷದ ಮಗನಿದ್ದಾನೆ. ಇನ್ನೂ ಆಸಿಡ್‌ ದಾಳಿಗೆ ಒಳಗಾದ ಮಾಜಿ ಪ್ರಿಯಕರ ಶೇಖ್ ಸೈಯದ್ (32), ಮದುವೆಯಾಗಲು ತಯಾರಾಗಿದ್ದ. ತನ್ನೊಂದಿಗೆ ಎಲ್ಲಾ ಮುಗಿದ ಮೇಲೆ ಕೈಕೊಟ್ಟನೆಂದು ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ.

ಸಯ್ಯದ್‌ ಮತ್ತು ಜಯಾ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಕಳೆದ 3 ವರ್ಷಗಳಲ್ಲಿ ಸೈಯ್ಯದ್‌ ಡ್ರೈವರ್‌ ಕೆಲಸಕ್ಕಾಗಿ ಕುವೈತ್‌ಗೆ ತೆರಳಿದ್ದ. ಭಾರತಕ್ಕೆ ಮರಳಿದ ನಂತರ ಜಯಾಳ ಸಂಪರ್ಕವನ್ನು ಬಿಟ್ಟು, ಇದೇ ಆಗಸ್ಟ್‌ 11ರಂದು ಬೇರೊಬ್ಬ ಮಹಿಳೆಯೊಂದಿಗೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿದ್ದ. ಮದುವೆ ನಿಲ್ಲಿಸುವ ಸಲುವಾಗಿ ಜಯಾ ಕೂಡ ಅಲ್ಲಿಗೆ ಬಂದಿದ್ದಳು. ಆದ್ರೆ ಸಯ್ಯದ್‌ ಆಕೆಯೊಂದಿಗೆ ಇರಲ್ಲ ಎಂದು ಹೇಳಿದ. ಇದರಿಂದ ಕೋಪಗೊಂಡ ಮಹಿಳೆ ಬಾತ್‌ರೂಮ್‌ ಕ್ಲೀನರ್‌ ಆಸಿಡ್‌ ತಂಡು ಅವನ ಮೇಲೆ ಎರಚಿದ್ದಾಳೆ. ಆದ್ರೆ ಅವನು ತಪ್ಪಿಸಿಕೊಂಡಿದ್ದರಿಂದ ಸಯ್ಯದ್‌ ಚಿಕ್ಕಮ್ಮನಿಗೆ ಆಸಿಡ್‌ ತಾಗಿದೆ. ಇದೇ ಕೋಪದಿಂದ ಅಲ್ಲೇ ಇದ್ದ ಚಾಕು ತೆಗೆದುಕೊಂಡು ಸಯ್ಯದ್‌ ಜಯಾಳಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾತ್ ರೂಂ ಕ್ಲೀನಿಂಗ್ ಆಸಿಡ್ ಆಗಿದ್ದರಿಂದ ಸೈಯದ್ ಚಿಕ್ಕಮ್ಮನಿಗೆ ಗಂಭೀರ ಗಾಯಗಳಾಗಿಲ್ಲ. ಇಯ್ಯ ಜಯಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಇಬ್ಬರ ವಿರುದ್ಧವೂ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡು ಬಂಧಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

11 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago