ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟಳು ಎಂಬ ಕಾರಣಕ್ಕೆ ರಾಜ್ಯ ಮಟಂದ ದೇಹದಾರ್ಡ್ಯ ಪಟುವೊಬ್ಬರು ಡೆತನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆ ವ್ಯಾಪ್ತಿಯ ಗೆಳೆಯರ ಬಳಗದಲ್ಲಿ ನಡೆದಿದೆ.
ಗೆಳೆಯರ ಬಳಗ ನಿವಾಸಿ ಕಿರಣ್ (26) ಆತ್ಮಹತ್ಯೆ ಮಾಡಿಕೊಂಡಿರುವ ಬಾಡಿ ಬಿಲ್ಡರ್, ಶನಿವಾರ ಸಂಜೆ ದುರ್ಘಟನೆ ನಡೆದಿದೆ. ಈ ಸಂಬಂಧ ಯುವತಿ, ಆಕೆಯ ತಾಯಿ ಮತ್ತು ಸಹೋದರನ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಕಿರಣ್ ರಾಜ್ಯ ಮಟ್ಟದ ಬಾಡಿಬಿಲ್ಡರ್ಆಗಿದ್ದು, ಸಮೀಪದ ಜಿಮ್ನಲ್ಲಿ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದರು. 3 ವರ್ಷಗಳಿಂದ ಯುವತಿ ಯೊಬ್ಬಳನ್ನು ಪ್ರೀತಿಸುತ್ತಿದ್ದರು. 2 ತಿಂಗಳ ಹಿಂದೆ ಪ್ರೀತಿಸಿದ ಯುವತಿಯನ್ನು ಮನೆಗೆ ಕರೆತಂದು ಪೋಷಕರಿಗೆ ತೋರಿಸಿ ಮದುವೆ ಮಾಡಿಕೊಡುವಂತೆ ಕೋರಿದ್ದರು. ಅದಕ್ಕೆ ಪೋಷಕರು ಕೂಡ ಒಪ್ಪಿಗೆ ಸೂಚಿಸಿದ್ದರು. ಆದರೆ, 15 ದಿನಗಳ ಹಿಂದೆ ಯುವತಿ ಮನೆಗೆ ಬಂದು ಪೋಷಕರ ಒತ್ತಾಯದ ಮೇರೆಗೆ ಬೇರೊಬ್ಬ ಯುವಕನನ್ನು ಮದುವೆಯಾಗುತ್ತಿದ್ದೇನೆ ಎಂದು ಆಹ್ವಾನ ಪತ್ರಿಕೆ ನೀಡಿದ್ದಳು. ಅಲ್ಲದೆ, ವರನ ಕಡೆಯವರು ನೀಡಿರುವ ಸೀರೆ ಎಂದು ತೋರಿಸಿದ್ದಳು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:
ನನ್ನ ಸಾವಿಗೆ ಯುವತಿ ಕಾರಣ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ
ಮನೆಯಲ್ಲಿ ಕಿರಣ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಒಂದು ಪುಟದ ಡೆತ್ನೋಟ್ ಬೆರದಿಟ್ಟಿದ್ದಾನೆ. ಅದರಲ್ಲಿ ಸುಮಾರು 3 ವರ್ಷಗಳಿಂದ ತುಂಬಾ ಪ್ರೀತಿಸುತ್ತಿದ್ದ ಯುವತಿ ನನಗೆ ಕೈ ಕೊಟ್ಟಿದ್ದು, ಅದರಿಂದ ಮಾನಸಿಕವಾಗಿ ಖನ್ನತೆ ಒಳಗಾಗಿದ್ದೇನೆ. ನನ್ನ ಸಾವಿಗೆ ಪ್ರೀತಿಸಿದ ಯುವತಿ, ಆಕೆಯ ತಾಯಿ ಮತ್ತು ಆಕೆಯ ಸಹೋದರನೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿತ ವ್ಯಕ್ತಿಗಳಿಗೆ ವಿಚಾರಣೆಗೆ ನೋಟಿಸ್ ಕೊಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…