ಹರ್ಷನ ಹತ್ಯೆ ಪ್ರಕರಣದ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹ ಪಾಲಾಗಿದ್ದು, ಈ ನಡುವೆ ಜೈಲಿನಲ್ಲಿದ್ದ ಕೊಲೆ ಆರೋಪಿಗಳಿಗೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳು ಲಭ್ಯವಾಗುತ್ತಿದ್ದು, ಹಂತಕರು ಜೈಲಿನಿಂದಲೇ ಹಲವು ಡೀಲ್ ಗಳನ್ನು ಮಾಡಿಕೊಂಡು ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ ಎನ್ನಲಾಗಿತ್ತು.
ಈ ಹಿನ್ನೆಲೆಯಲ್ಲಿ ಗೃಹ ಸಚಿವರು ದಿಢೀರ್ ಆಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಜೈಲಿನಲ್ಲಿದ್ದ ಆರೋಪಿಗಳಿಗೆ ನೇರವಾಗಿ ಪ್ರಶ್ನಿಸಿರುವ ಗೃಹ ಸಚಿವರು ಮೊಬೈಲ್ ಫೋನ್ ಕೈಗೆ ಸಿಕ್ಕಿದ್ದು ಹೇಗೆ ಎಂದು ಕೇಳಿದ್ದಾರೆ.
ಇದೇ ವೇಳೆ ಜೈಲಿನಲ್ಲಿ ಅಕ್ರಮ ಚಟುವಟಿಕೆ ಬಗ್ಗೆ ವರದಿ ಹಿನ್ನೆಲೆಯಲ್ಲಿ ಕಾರಾಗೃಹದ ಹೈಸೆಕ್ಯೂರಿಟಿ ಬ್ಯಾರಕ್ ಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ವೈರಲ್ ಆಗಿದ್ದ ಹರ್ಷ ಕೊಲೆ ಪ್ರಕರಣದ ಆರೋಪಿಗಳ ವಿಡಿಯೋ
ಇನ್ನು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ಬೆಂಗಳೂರು ಜೈಲಿನಿಂದ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಇದು ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಹರ್ಷನ ಕೊಲೆ ಆರೋಪಿಗಳು ಜೈಲಿನಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…