Featured

ಕೈದಿಗಳ ಅಕ್ರಮ ಚಟುವಟಿಕೆ ಆರೋಪ, ಪರಪ್ಪನ ಅಗ್ರಹಾರಕ್ಕೆ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ  – Vishwanews24

ಕೈದಿಗಳ ಅಕ್ರಮ ಚಟುವಟಿಕೆ ಆರೋಪ, ಪರಪ್ಪನ ಅಗ್ರಹಾರಕ್ಕೆ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ

ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಹಂತಕರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಗೃಹ ಸಚಿವ ಅರಗ ಜ್ಞಾನೇಂದ್ರ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ್ದು, ಖುದ್ದು ಪರಿಶೀಲನೆ ನಡೆಸಿದ್ದಾರೆ.

ಹರ್ಷನ ಹತ್ಯೆ ಪ್ರಕರಣದ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹ ಪಾಲಾಗಿದ್ದು, ಈ ನಡುವೆ ಜೈಲಿನಲ್ಲಿದ್ದ ಕೊಲೆ ಆರೋಪಿಗಳಿಗೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳು ಲಭ್ಯವಾಗುತ್ತಿದ್ದು, ಹಂತಕರು ಜೈಲಿನಿಂದಲೇ ಹಲವು ಡೀಲ್ ಗಳನ್ನು ಮಾಡಿಕೊಂಡು ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ ಎನ್ನಲಾಗಿತ್ತು.

ಈ ಹಿನ್ನೆಲೆಯಲ್ಲಿ ಗೃಹ ಸಚಿವರು ದಿಢೀರ್ ಆಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಜೈಲಿನಲ್ಲಿದ್ದ ಆರೋಪಿಗಳಿಗೆ ನೇರವಾಗಿ ಪ್ರಶ್ನಿಸಿರುವ ಗೃಹ ಸಚಿವರು ಮೊಬೈಲ್ ಫೋನ್ ಕೈಗೆ ಸಿಕ್ಕಿದ್ದು ಹೇಗೆ ಎಂದು ಕೇಳಿದ್ದಾರೆ.

ಇದೇ ವೇಳೆ ಜೈಲಿನಲ್ಲಿ ಅಕ್ರಮ ಚಟುವಟಿಕೆ ಬಗ್ಗೆ ವರದಿ ಹಿನ್ನೆಲೆಯಲ್ಲಿ ಕಾರಾಗೃಹದ ಹೈಸೆಕ್ಯೂರಿಟಿ ಬ್ಯಾರಕ್ ಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್ ಆಗಿದ್ದ ಹರ್ಷ ಕೊಲೆ ಪ್ರಕರಣದ ಆರೋಪಿಗಳ ವಿಡಿಯೋ

ಇನ್ನು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ಬೆಂಗಳೂರು ಜೈಲಿನಿಂದ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಇದು ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಹರ್ಷನ ಕೊಲೆ ಆರೋಪಿಗಳು ಜೈಲಿನಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

37 minutes ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

10 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

10 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

10 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago