Featured

ಕೈಪುಂಜಾಲು ಸಯ್ಯಿದ್ ಅರಬಿ ವಲಿಯುಲ್ಲಾ ಧರ್ಮ ಸಾಮರಸ್ಯ ದರ್ಗಾ:21 ಸೆಪ್ಟೆಂಬರ್ ಸಫರ್ ಝಿಯಾರತ್ ಸಮಾರಂಭ:vishwanews24

ಕೈಪುಂಜಾಲು ಸಯ್ಯಿದ್ ಅರಬಿ ವಲಿಯುಲ್ಲಾ ಧರ್ಮ ಸಾಮರಸ್ಯ ದರ್ಗಾ:21 ಸೆಪ್ಟೆಂಬರ್ ಸಫರ್ ಝಿಯಾರತ್ ಸಮಾರಂಭ:vishwanews24

ಹಿಂದು ಮುಸ್ಲಿಮ್ ಭೇದ ಭಾವ ಇಲ್ಲದೆ ಆಚರಿಸುವ ಝಿಯಾರತ್ ಸಮಾರಂಭ

ಕಾಪು: ಕೈಪುಂಜಾಲು ಸಮುದ್ರ ಕಿನಾರೆಯಲ್ಲಿ ಅಂತ್ಯ ವಿಶ್ರಾಂತಿ ಹೊಂದಿರುವ ಸಯ್ಯಿದ್ ಅರಭಿ ವಲಿಯುಲ್ಲಾರವರ ದರ್ಗಾದಲ್ಲಿ ವರ್ಷಂಪ್ರತಿ ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಸಫರ್ ತಿಂಗಳ ಕೊನೆಯ ಬುಧವಾರದಂದು ನಡೆಸುತ್ತಾ ಬಂದಿರುವ ಸಪರ್‌ ಝಿಯಾರತ್ ಸಮಾರಂಭವು ಇದೇ ಬರುವ ತಾ, 21,09,2022 ಬುಧವಾರ ದಂದು ವಿಜಂಭಣೆಯಿಂದ ದರ್ಗಾದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪೊಲಿಪು ಮಸೀದಿಯ ಆಡಳಿತ ಸಮಿತಿ ಸದಸ್ಯ ಅಮೀರ್ ಹಂಝಾ ತಿಳಿಸಿದರು.

ಕಾಪು-ಪೊಲಿಪುಜಾಮಿಯಾ ಮಸೀದಿಯ ಆಡಳಿತಕ್ಕೆ ಒಳಪಟ್ಟ ಕೈಪುಂಜಾಲ್ ಸಯ್ಯಿದ್ ಅರಬಿ ವಲಿಯುಲ್ಲಾರವರ ದರ್ಗಾದಲ್ಲಿ ವಿಜೃಂಭಣೆಯಿಂದ ನಡೆಯುತ್ತಾ ಬಂದಿರುವ ಸಫರ್ ಝಿಯಾರದ ಸಮಾರಂಭವು, ಕಳೆದ ಎರಡು ವರ್ಷ ಕೊರೋನಾದ ಕಾರಣದಿಂದಾಗಿ ಸಾಂಕೇತಿಕವಾಗಿ ನಡೆಸಿರುತ್ತೇವೆ, ಆದರೆ ಈ ಬಾರಿ ಈ ಮೊದಲಿನಂತೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಿದ್ದು, ಬೆಳಗ್ಗೆ 6.00 ಗಂಟೆಗೆ ಪ್ರಾರಂಭವಾದರೆ ಸಂಜೆ 7.00 ಗಂಟೆ ತನಕ ಝಿಯಾರತ್ ಸಮಾರಂಭ ನಡೆಯಲಿದೆ. ಬೆಳಿಗ್ಗೆ 5 ಗಂಟೆಗೆ ಕಾಪು ಖಾಝಿ ಅಲ್ ಹಾಜ್ ಪಿ.ಬಿ.ಅಹ್ಮದ್‌ ಮುಸ್ಲಿಯಾರ್ ರವರು ದುಆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ, ಈ ಕಾರ್ಯಕ್ರಮವನ್ನು ಪೊಲಿಪು ಜಾಮಿಯಾ ಮಸೀದಿಯ ಖತೀಬರಾದ ಮುಹಮ್ಮದ್ ಇರ್ಷಾದ್ ಸಅದಿಯವರು ಉದ್ಘಾಟಿಸಲಿದ್ದಾರೆ. ಈ ಸಮಾರಂಭವು ಪೊಲಿಪು ಜಾಮಿಯಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾದ H.ಅಬುಲ್ಲ ಸೂಪರ್ ಸ್ಟಾರ್’, ‘ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ, ದಿ. H.ಮಹಮ್ಮದ್ ರವರ ಮಗ ಸಫ್ರ್ರಾಝ್ ರವರ ಉಸ್ತುವಾರಿಯಲ್ಲಿ ಈ ಬಾರಿ ಸಯೀದ್ ಅರಭಿ ವಲಿಯುಲ್ಲಾ ರವರ ದರ್ಗಾದಲ್ಲಿ ಆಂತರಿಕ ಜೀರ್ಣೋ ದ್ಧಾರ ಕೂಡ ನಡೆದಿರುತ್ತದೆ. ಇದಕ್ಕೆ ನರೇಂದ್ರ ಶ್ರೀಯಾನ್ ಮತ್ತು ಗುಣವಂತ ಶ್ರೀಯಾನ್ ಹಾಗೂ ಕುಟುಂಬದವರು ತುಂಬು ಸಹಕಾರ ನೀಡಿರುತ್ತಾರೆ.

ಈ ವಾರ್ಷಿಕ ಝಿಯಾರತ್ ಸಮಾರಂಭ ಅಲ್ಲದೇ ಬೇರೆ ದಿನಗಳಲ್ಲಿ ಅಲ್ಲಿಗೆ ಝಿಯಾರತ್ ಗೆ ಬರುವವರಿಗೆ ಸಂಜೆ 6ಗಂಟೆ ತನಕ ಅವಕಾಶ ಮಾತ್ರ ಇರುತ್ತದೆ. ಈ ಸಮಾರಂಭಕ್ಕೆ ಎಲ್ಲರನ್ನೂ ಕೂಡ ಈ ಸಂಧರ್ಭದಲ್ಲಿ ಆಹ್ವಾನಿಸುತ್ತಿದ್ದೇವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ‌ ಸಂಧರ್ಭದಲ್ಲಿ ಅಧ್ಯಕ್ಷ ಎಚ್ ಅಬ್ದುಲ್ ಸ್ಟಾರ್ , ರಜಾಬ್ ಹಾಜಿ ಮೊಯಿದ್ದಿನ್, ಇಂತಿಯಾಜ್ ಅಹಮ್ಮದ್,ಸರ್ಫರಾಜ್, ಇಲಿಯಾಸ್ , ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

16 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

16 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

17 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

17 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

18 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

19 hours ago