ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ವರ್ಷದ ಸರಾಸರಿ ಆಧಾರದಲ್ಲಿ ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ. ಗ್ಯಾರಂಟಿ ಜಾರಿ ವಿಚಾರದಲ್ಲಿ ಯಾವುದೇ ಧರ್ಮ, ಜಾತಿ, ಭಾಷೆ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಒಡತಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಗೆ ಫಲಾನುಭವಿಗಳು ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ ಬಳಿಕ ಆಗಸ್ಟ್ ನ ೧೫ರಂದು ಇದು ಜಾರಿಯಾಗುವುದು ಇದು ಬಿಪಿಎಲ್ ಮತ್ತು ಎಪಿಎಲ್ ಕಾರ್ಡು ದಾರರು ವರ್ಗದ ಜನರಿಗೂ ಇದು ಅನ್ವಯವಾಗಲಿದೆ. ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು ಎಂದು ಹೇಳಿದ್ದಾರೆ.
ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಶಕ್ತಿ ಯೋಜನೆ: ಮಹಿಳೆಯರಿಗೆ ಎಸಿ ಬಸ್, ನಾನ್ ಎಸಿ ಸ್ಲೀಪರ್ , ಲಕ್ಸುರಿ ಬಸ್ ಹೊರತುಪಡಿಸಿ ಎಕ್ಸ್ ಪ್ರೆಸ್ ಬಸ್ ಸಹಿತ ರಾಜ್ಯಾದ್ಯಾಂತ ಉಚಿತ ಪ್ರಯಾಣ ಮಾಡಬಹುದು. ಈ ಯೋಜನೆ ಜು.11 ರಂದು ಜಾರಿಗೆ ಬರಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…