Featured

ಕೊಂಕಣ ರೈಲು ಮಾರ್ಗದಲ್ಲಿ ಕಾಮಗಾರಿ: ಜು.24ರಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ – vishwanews24

ಉಡುಪಿ:  ಕೊಂಕಣ ರೈಲು ಮಾರ್ಗದಲ್ಲಿ ಕಾಮಗಾರಿ: ಜು.24ರಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ; ಕೊಂಕಣ ರೈಲ್ವೆ ಪ್ರಕಟಣೆ

ಉಡುಪಿ: ಕೊಂಕಣ ರೈಲು ಮಾರ್ಗದ ಲೋಲಿಮ್ ಹಾಗೂ ಅಸ್ನೋಟಿ ನಿಲ್ದಾಣಗಳ ನಡುವೆ ಬರುವ ಜುಲೈ 24ರ ಗುರುವಾರ ಬೆಳಗ್ಗೆ 10:20ರಿಂದ ಅಪರಾಹ್ನ 1:50ರವರೆಗೆ ಹಳಿ ಅಭಿವೃದ್ಧಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮೂರೂವರೆ ಗಂಟೆಗಳ ಕಾಲ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಜು.24 ರಂದು ಅಂದು ಸಂಚರಿಸುವ ರೈಲು ನಂ.56616 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ಪ್ಯಾಸೆಂಜರ್ ರೈಲನ್ನು ಕುಮಟ ಮತ್ತು ಕಾರವಾರ ನಿಲ್ದಾಣಗಳ ಮಧ್ಯೆ 90 ನಿಮಿಷ ತಡೆ ಹಿಡಿಯಲಾಗುವುದು. ರೈಲು ನಂ.56615 ಮಡಗಾಂವ್ ಜಂಕ್ಷನ್- ಮಂಗಳೂರು ಪ್ಯಾಸೆಂಜರ್ ರೈಲು ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಮಡಗಾಂವ್ ಜಂಕ್ಷನ್‌ನಿಂದ ಪ್ರಯಾಣ ಆರಂಭಿಸಲಿದೆ. ಈ ರೈಲು ಅಪರಾಹ್ನ 2:10ರ ಬದಲು 3:10ಕ್ಕೆ ಪ್ರಯಾಣ ಪ್ರಾರಂಭಿಸಲಿದೆ.

ಜು.23ರಂದು ಉದ್ನಾದಿಂದ ಹೊರಡುವ ರೈಲು ನಂ.09057 ಉದ್ನಾ- ಮಂಗಳೂರು ಜಂಕ್ಷನ್ ಸ್ಪೆಷಲ್ ರೈಲಿನ ಪ್ರಯಾಣವನ್ನು ಮಡಗಾಂವ್ ಜಂಕ್ಷನ್ ಹಾಗೂ ಕನಕೋನಾ ನಿಲ್ದಾಣಗಳ ನಡುವೆ 30 ನಿಮಿಷಗಳ ಕಾಲ ತಡೆ ಹಿಡಿಯಲಾಗುವುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

1 hour ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

2 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

2 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

2 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago