Featured

ಕೊಂಕಣ ರೈಲು ಮಾರ್ಗದಲ್ಲಿ ಕಾಮಗಾರಿ: ಜು.24ರಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ – vishwanews24

ಉಡುಪಿ:  ಕೊಂಕಣ ರೈಲು ಮಾರ್ಗದಲ್ಲಿ ಕಾಮಗಾರಿ: ಜು.24ರಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ; ಕೊಂಕಣ ರೈಲ್ವೆ ಪ್ರಕಟಣೆ

ಉಡುಪಿ: ಕೊಂಕಣ ರೈಲು ಮಾರ್ಗದ ಲೋಲಿಮ್ ಹಾಗೂ ಅಸ್ನೋಟಿ ನಿಲ್ದಾಣಗಳ ನಡುವೆ ಬರುವ ಜುಲೈ 24ರ ಗುರುವಾರ ಬೆಳಗ್ಗೆ 10:20ರಿಂದ ಅಪರಾಹ್ನ 1:50ರವರೆಗೆ ಹಳಿ ಅಭಿವೃದ್ಧಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮೂರೂವರೆ ಗಂಟೆಗಳ ಕಾಲ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಜು.24 ರಂದು ಅಂದು ಸಂಚರಿಸುವ ರೈಲು ನಂ.56616 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ಪ್ಯಾಸೆಂಜರ್ ರೈಲನ್ನು ಕುಮಟ ಮತ್ತು ಕಾರವಾರ ನಿಲ್ದಾಣಗಳ ಮಧ್ಯೆ 90 ನಿಮಿಷ ತಡೆ ಹಿಡಿಯಲಾಗುವುದು. ರೈಲು ನಂ.56615 ಮಡಗಾಂವ್ ಜಂಕ್ಷನ್- ಮಂಗಳೂರು ಪ್ಯಾಸೆಂಜರ್ ರೈಲು ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಮಡಗಾಂವ್ ಜಂಕ್ಷನ್‌ನಿಂದ ಪ್ರಯಾಣ ಆರಂಭಿಸಲಿದೆ. ಈ ರೈಲು ಅಪರಾಹ್ನ 2:10ರ ಬದಲು 3:10ಕ್ಕೆ ಪ್ರಯಾಣ ಪ್ರಾರಂಭಿಸಲಿದೆ.

ಜು.23ರಂದು ಉದ್ನಾದಿಂದ ಹೊರಡುವ ರೈಲು ನಂ.09057 ಉದ್ನಾ- ಮಂಗಳೂರು ಜಂಕ್ಷನ್ ಸ್ಪೆಷಲ್ ರೈಲಿನ ಪ್ರಯಾಣವನ್ನು ಮಡಗಾಂವ್ ಜಂಕ್ಷನ್ ಹಾಗೂ ಕನಕೋನಾ ನಿಲ್ದಾಣಗಳ ನಡುವೆ 30 ನಿಮಿಷಗಳ ಕಾಲ ತಡೆ ಹಿಡಿಯಲಾಗುವುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

13 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

14 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

14 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

15 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

16 hours ago