ಉಡುಪಿ: ಮುಂಗಾರು ಸವಾಲಿಗೆ ಕೊಂಕಣ ರೈಲ್ವೇ ಸಜ್ಜಾಗುತ್ತಿದ್ದು, ಪ್ರಯಾಣಿಕರ ಸುರಕ್ಷೆಗೆ ವಿಶೇಷ ಕ್ರಮ ತೆಗೆದುಕೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ವೇಳೆಯಲ್ಲಿ ರೈಲು ಸಂಚಾರ ಸಂಬಂಧ ವೇಳಾಪಟ್ಟಿ ಪ್ರಕಟಿಸಿದ್ದು ಜೂ. 15ರಿಂದ ಜಾರಿಗೆ ಬರಲಿದೆ.
ಕೊಂಕಣ ಭಾಗದಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ಭಾರೀ ಮಳೆ, ಗುಡ್ಡ ಕುಸಿತ ಹಾಗೂ ಕಠಿನ ಭೌಗೋಳಿಕ ಪರಿಸ್ಥಿತಿಗಳು ರೈಲು ಸಂಚಾರಕ್ಕೆ ಸವಾಲಾಗುತ್ತವೆ. ಈ ಹಿನ್ನೆಲೆ ಯಲ್ಲಿ ಪ್ರಯಾಣಿಕರ ಸುರಕ್ಷೆ ಹಾಗೂ ರೈಲುಗಳ ನಿರಂತರ ಸಂಚಾರಕ್ಕೆ ಆದ್ಯತೆ ನೀಡಿರುವ ಕೊಂಕಣ ರೈಲ್ವೆ ವ್ಯಾಪಕ ಮುಂಗಾರು ಸಿದ್ಧತೆ ಕೈಗೊಂಡಿದೆ.
ಇದನ್ನೂ ಓದಿ:
ರೈಲ್ವೇ ಮಾರ್ಗದ ವಿವಿಧ ಭಾಗಗಳಲ್ಲಿ ಮೂಲಸೌಕರ್ಯ ಬಲಪಡಿಸುವುದು, ಭೂಸುರಕ್ಷಾ ಕ್ರಮಗಳು, ರಿಯಲ್ ಟೈಮ್ ನಿಗಾವ್ಯವಸ್ಥೆ ತೀವ್ರ ಗಸ್ತು ಹಾಗೂ ತುರ್ತು ಪ್ರತಿಕ್ರಿಯೆ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಹವಾಮಾನ ಮಾಹಿತಿ ಪಡೆಯಲು ಭಾರತೀಯ ಹವಾಮಾನ ಇಲಾಖೆ ಜತೆ ಕೊಂಕಣ ರೈಲ್ವೆ ನಿಕಟ ಸಮನ್ವಯದಲ್ಲಿದೆ. ಕೆಲವು ರೈಲು ವಿಭಾಗಗಳಲ್ಲಿ ವೇಗ ನಿಯಂತ್ರಣ ಜಾರಿಗೊಳಿಸ ಲಾಗುತ್ತದೆ. ಇದೇ ಕಾರಣಕ್ಕೆ ಜೂ. 15ರಿಂದ ಅ. 20ರ ವರೆಗೆ ವಿಶೇಷ ಮುಂಗಾರು ವೇಳಾಪಟ್ಟಿ ಜಾರಿಯಲ್ಲಿರಲಿದೆ.
ಪ್ರಯಾಣಿಕರು ಪ್ರಯಾಣ ಆರಂಭಿಸುವ ಮೊದಲು ರೈಲುಗಳ ಆಗಮನ ಹಾಗೂ ನಿರ್ಗಮನ ಸಮಯವನ್ನು ಪರಿಶೀಲಿಸಿಕೊಳ್ಳುವಂತೆ ಕೊಂಕಣ ರೈಲ್ವೇ ಮನವಿ ಮಾಡಿದೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…