ಉಡುಪಿ: ಮುಂಗಾರು ಸವಾಲಿಗೆ ಕೊಂಕಣ ರೈಲ್ವೇ ಸಜ್ಜಾಗುತ್ತಿದ್ದು, ಪ್ರಯಾಣಿಕರ ಸುರಕ್ಷೆಗೆ ವಿಶೇಷ ಕ್ರಮ ತೆಗೆದುಕೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ವೇಳೆಯಲ್ಲಿ ರೈಲು ಸಂಚಾರ ಸಂಬಂಧ ವೇಳಾಪಟ್ಟಿ ಪ್ರಕಟಿಸಿದ್ದು ಜೂ. 15ರಿಂದ ಜಾರಿಗೆ ಬರಲಿದೆ.
ಕೊಂಕಣ ಭಾಗದಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ಭಾರೀ ಮಳೆ, ಗುಡ್ಡ ಕುಸಿತ ಹಾಗೂ ಕಠಿನ ಭೌಗೋಳಿಕ ಪರಿಸ್ಥಿತಿಗಳು ರೈಲು ಸಂಚಾರಕ್ಕೆ ಸವಾಲಾಗುತ್ತವೆ. ಈ ಹಿನ್ನೆಲೆ ಯಲ್ಲಿ ಪ್ರಯಾಣಿಕರ ಸುರಕ್ಷೆ ಹಾಗೂ ರೈಲುಗಳ ನಿರಂತರ ಸಂಚಾರಕ್ಕೆ ಆದ್ಯತೆ ನೀಡಿರುವ ಕೊಂಕಣ ರೈಲ್ವೆ ವ್ಯಾಪಕ ಮುಂಗಾರು ಸಿದ್ಧತೆ ಕೈಗೊಂಡಿದೆ.
ಇದನ್ನೂ ಓದಿ:
ರೈಲ್ವೇ ಮಾರ್ಗದ ವಿವಿಧ ಭಾಗಗಳಲ್ಲಿ ಮೂಲಸೌಕರ್ಯ ಬಲಪಡಿಸುವುದು, ಭೂಸುರಕ್ಷಾ ಕ್ರಮಗಳು, ರಿಯಲ್ ಟೈಮ್ ನಿಗಾವ್ಯವಸ್ಥೆ ತೀವ್ರ ಗಸ್ತು ಹಾಗೂ ತುರ್ತು ಪ್ರತಿಕ್ರಿಯೆ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಹವಾಮಾನ ಮಾಹಿತಿ ಪಡೆಯಲು ಭಾರತೀಯ ಹವಾಮಾನ ಇಲಾಖೆ ಜತೆ ಕೊಂಕಣ ರೈಲ್ವೆ ನಿಕಟ ಸಮನ್ವಯದಲ್ಲಿದೆ. ಕೆಲವು ರೈಲು ವಿಭಾಗಗಳಲ್ಲಿ ವೇಗ ನಿಯಂತ್ರಣ ಜಾರಿಗೊಳಿಸ ಲಾಗುತ್ತದೆ. ಇದೇ ಕಾರಣಕ್ಕೆ ಜೂ. 15ರಿಂದ ಅ. 20ರ ವರೆಗೆ ವಿಶೇಷ ಮುಂಗಾರು ವೇಳಾಪಟ್ಟಿ ಜಾರಿಯಲ್ಲಿರಲಿದೆ.
ಪ್ರಯಾಣಿಕರು ಪ್ರಯಾಣ ಆರಂಭಿಸುವ ಮೊದಲು ರೈಲುಗಳ ಆಗಮನ ಹಾಗೂ ನಿರ್ಗಮನ ಸಮಯವನ್ನು ಪರಿಶೀಲಿಸಿಕೊಳ್ಳುವಂತೆ ಕೊಂಕಣ ರೈಲ್ವೇ ಮನವಿ ಮಾಡಿದೆ.
ಇದನ್ನೂ ಓದಿ:
ಇಂಧನ ದರ ಏರಿಕೆ : ಏರ್ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…
ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…
ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…
ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…
ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್ಎಂಟೆ ನಿಲ್ದಾಣದಲ್ಲಿ ಪ್ಲಾಟ್ಫಾರಂ ವಿಸ್ತರಣಾ…
ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು ಮಂಗಳೂರು : ಕರ್ನಾಟಕಕ್ಕೆ ಮುಂಗಾರು ಮಾರುತಗಳ ಪ್ರವೇಶ ಕೊಂಚ ವಿಳಂಬವಾಗುವ…