Featured

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ

ಮುಂಬೈ: ಮುಂಬರುವ ಮುಂಗಾರು (ಮಳೆಗಾಲ) ಋತುವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ರೈಲ್ವೆ ವಲಯವು ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ಒಟ್ಟು 40 ಪ್ರಮುಖ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಈ ಹೊಸ ಪಟ್ಟಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ತೇಜಸ್ ಎಕ್ಸ್‌ಪ್ರೆಸ್ ಮತ್ತು ದುರಂತೋ ಎಕ್ಸ್‌ಪ್ರೆಸ್‌ನಂತಹ ಪ್ರೀಮಿಯಂ ರೈಲುಗಳ ಸಮಯ ಹಾಗೂ ಸಂಚಾರದ ದಿನಗಳೂ ಬದಲಾಗಿದ್ದು, ಜೂನ್‌ನಿಂದ ಅಕ್ಟೋಬರ್‌ವರೆಗಿನ ಮಳೆಗಾಲದ ಅವಧಿಗೆ ಇದು ಅನ್ವಯಿಸಲಿದೆ.

ಜೂನ್ 15 ರಿಂದ ಅಕ್ಟೋಬರ್ 20 ರವರೆಗೆ ಹೊಸ ವೇಳಾಪಟ್ಟಿ ಜಾರಿ
ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಡಾ. ಸ್ವಪ್ನಿಲ್ ನಿಲಾ ಅವರು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, “ಸೆಂಟ್ರಲ್ ರೈಲ್ವೆ ಮಾರ್ಗವಾಗಿ ಪ್ರಾರಂಭವಾಗುವ, ಕೊನೆಗೊಳ್ಳುವ ಅಥವಾ ಹಾದುಹೋಗುವ ಕೊಂಕಣ ಮಾರ್ಗದ ರೈಲುಗಳ ‘ಮುಂಗಾರು ವೇಳಾಪಟ್ಟಿ’ಯು 15.06.2026 ರಿಂದ ಜಾರಿಗೆ ಬರಲಿದ್ದು, 20.10.2026 ರವರೆಗೆ ಚಾಲ್ತಿಯಲ್ಲಿರಲಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸುವ ಮುನ್ನ ಪರಿಷ್ಕೃತ ರೈಲು ವೇಳಾಪಟ್ಟಿ ಮತ್ತು ಲೈವ್ ಸ್ಟೇಟಸ್ ಪರಿಶೀಲಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ. ಪ್ರಯಾಣಿಕರು ಇತ್ತೀಚಿನ ಅಪ್‌ಡೇಟ್‌ಗಳಿಗಾಗಿ ಅಧಿಕೃತ ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ ವೆಬ್‌ಸೈಟ್ ಅಥವಾ ಮೊಬೈಲ್‌ನಲ್ಲಿ ಲಭ್ಯವಿರುವ NTES ಆ್ಯಪ್ ಅನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: 

ಸಿಎಸ್‌ಎಂಟಿ – ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22229): ಸಾಮಾನ್ಯವಾಗಿ ವಾರದಲ್ಲಿ 6 ದಿನ (ಶುಕ್ರವಾರ ಹೊರತುಪಡಿಸಿ) ಚಲಿಸುವ ಈ ರೈಲು, ಮುಂಗಾರು ಅವಧಿಯಲ್ಲಿ (15/06/2026 ರಿಂದ 19/10/2026) ವಾರಕ್ಕೆ ಕೇವಲ 3 ದಿನ ಅಂದರೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಾತ್ರ ಸಂಚರಿಸಲಿದೆ.

ಮಡಗಾಂವ್ – ಸಿಎಸ್‌ಎಂಟಿ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22230): ವಾರದಲ್ಲಿ 6 ದಿನ ಓಡುತ್ತಿದ್ದ ಈ ರೈಲು, ಮಳೆಗಾಲದ ಅವಧಿಯಲ್ಲಿ (16/06/2026 ರಿಂದ 20/10/2026) ವಾರಕ್ಕೆ ಮೂರು ದಿನ ಅಂದರೆ ಮಂಗಳವಾರ, ಗುರುವಾರ ಮತ್ತು ಶನಿವಾರ ಮಾತ್ರ ಚಲಿಸಲಿದೆ.

ಸಿಎಸ್‌ಎಂಟಿ – ಮಡಗಾಂವ್ ತೇಜಸ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22119): ಮೂಲತಃ ವಾರದಲ್ಲಿ 5 ದಿನ (ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ, ಭಾನುವಾರ) ಸಂಚರಿಸುತ್ತಿದ್ದ ಈ ರೈಲು, ಜೂನ್ 16 ರಿಂದ ಅಕ್ಟೋಬರ್ 20 ರವರೆಗೆ ವಾರಕ್ಕೆ 3 ದಿನ ಅಂದರೆ ಮಂಗಳವಾರ, ಗುರುವಾರ ಮತ್ತು ಶನಿವಾರ ಓಡಲಿದೆ.

ಮಡಗಾಂವ್ – ಸಿಎಸ್‌ಎಂಟಿ ತೇಜಸ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22120): ವಾರದಲ್ಲಿ 5 ದಿನ (ಸೋಮವಾರ ಮತ್ತು ಗುರುವಾರ ಹೊರತುಪಡಿಸಿ) ಸಂಚರಿಸುತ್ತಿದ್ದ ಈ ರೈಲು, ಜೂನ್ 17 ರಿಂದ ಅಕ್ಟೋಬರ್ 18 ರವರೆಗೆ ವಾರಕ್ಕೆ 3 ದಿನ ಅಂದರೆ ಬುಧವಾರ, ಶುಕ್ರವಾರ ಮತ್ತು ಭಾನುವಾರ ಮಾತ್ರ ಸಂಚರಿಸಲಿದೆ.

ಇದನ್ನೂ ಓದಿ: 

ಎಲ್‌ಟಿಟಿ – ಮಡಗಾಂವ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 11099): ವಾರದಲ್ಲಿ 4 ದಿನ (ಮಂಗಳವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ) ಚಲಿಸುತ್ತಿದ್ದ ಈ ರೈಲು, ಮುಂಗಾರು ಅವಧಿಯಲ್ಲಿ (19/06/2026 ರಿಂದ 18/10/2026) ವಾರಕ್ಕೆ ಕೇವಲ 2 ದಿನ ಅಂದರೆ ಶುಕ್ರವಾರ ಮತ್ತು ಭಾನುವಾರ ಮಾತ್ರ ಕಾರ್ಯನಿರ್ವಹಿಸಲಿದೆ.

ಮಡಗಾಂವ್ – ಎಲ್‌ಟಿಟಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 11100): ವಾರದಲ್ಲಿ 4 ದಿನ (ಮಂಗಳವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ) ಓಡುತ್ತಿದ್ದ ಈ ರೈಲು, ಜೂನ್ 20 ರಿಂದ ಅಕ್ಟೋಬರ್ 19 ರವರೆಗೆ ವಾರಕ್ಕೆ 2 ದಿನ ಅಂದರೆ ಶನಿವಾರ ಮತ್ತು ಸೋಮವಾರ ಮಾತ್ರ ಸಂಚರಿಸಲಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

22 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

22 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

24 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

24 hours ago