Featured

ಕೊಂಕಣ ರೈಲ್ವೆ ವಲಯದ ಸಾಮರ್ಥ್ಯ ಬಲಪಡಿಸಲು ವಿಸ್ತೃತ ಯೋಜನಾ ವರದಿ: ಸಚಿವ ಅಶ್ವಿನಿ ವೈಷ್ಣವ್ – vishwanews24

ಕೊಂಕಣ ರೈಲ್ವೆ ವಲಯದ ಸಾಮರ್ಥ್ಯ ಬಲಪಡಿಸಲು ವಿಸ್ತೃತ ಯೋಜನಾ ವರದಿ: ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಕೊಂಕಣ ರೈಲ್ವೆ ವಲಯ ಅತ್ಯಂತ ಮಹತ್ವಪೂರ್ಣವಾಗಿದ್ದು, ಈ ಭಾಗದಲ್ಲಿ ಜೋಡಿ ಮಾರ್ಗ ನಿರ್ಮಾಣ, ರೈಲು ಹಳಿ ಬಲಪಡಿಸುವುದು ಸೇರಿದಂತೆ ಒಟ್ಟು ಸಾಮರ್ಥ್ಯ ಬಲಪಡಿಸಲು ವಿಸ್ತೃತ ಯೋಜನಾ ವರದಿ ರೂಪಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಉತ್ತರ ನೀಡಿದ ಅವರು, “ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಕೇರಳ ರಾಜ್ಯಗಳು ಕೊಂಕಣ ರೈಲ್ವೆ ವಲಯದ ಭಾಗೀದಾರರಾಗಿದ್ದು, ತಮ್ಮ ಪಾಲಿನ ಅಗತ್ಯ ಕೊಡುಗೆ ನೀಡಬೇಕಿದೆ. ರೈಲು ಮಾರ್ಗದಲ್ಲಿ ವನ್ಯಮೃಗ ಸಂಘರ್ಷ ತಪ್ಪಿಸಲು ಅಂಡರ್ ಪಾಸ್, ಓವರ್ ಬ್ರಿಡ್ಜ್ ನಿರ್ಮಾಣದ ಜೊತೆಗೆ ಆಪ್ಟಿಕಲ್ ಫೈಬರ್ ಕೇಬಲ್ ಹಾಗೂ ಎಐ ಕ್ಯಾಮರಾ ಆಧಾರಿತ ಎರಡು ಅತ್ಯಾಧುನಿಕ ತಂತ್ರಜ್ಞಾನ ಬಳಸಲಾಗುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ: 

“ರೈಲು ಅಪಘಾತ ತಪ್ಪಿಸುವ ಕವಚ್ ತಂತ್ರಜ್ಞಾನ ಅತ್ಯಾಧುನಿಕ ಹಾಗೂ ಸಂಕೀರ್ಣವಾಗಿದ್ದು, 2016ರಲ್ಲಿ ಯೋಜನೆ ಆರಂಭಿಸಲಾಯಿತು. 2024ರ ಜುಲೈ ನಲ್ಲಿ ಅಂತಿಮ ವಿನ್ಯಾಸ ರೂಪುಗೊಂಡಿದ್ದು, ಇದು ಜಾಗತಿಕ ಶ್ಲಾಘನೆಗೆ ಪಾತ್ರವಾಗಿದೆ. ಕವಚ್ ತಂತ್ರಜ್ಞಾನದಲ್ಲಿ 5 ಭಾಗಗಳಿದ್ದು, ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಕೆ ಆರಂಭಿಕ ಹಂತವಾಗಿದ್ದು, ಈಗಾಗಲೆ 8,570 ಕಿಲೋ ಮೀಟರ್ ಮಾರ್ಗಗಳಲ್ಲಿ ಇದನ್ನು ಅಳವಡಿಸಲಾಗಿದೆ. ಇದಲ್ಲದೆ 1,100 ಕಿಲೋ ಮೀಟರ್ ಗೂ ಹೆಚ್ಚು ಮಾರ್ಗದಲ್ಲಿ ದೂರಸಂಪರ್ಕ ಗೋಪುರ ಅಳವಡಿಸಲಾಗಿದ್ದು, 767 ರೈಲು ನಿಲ್ದಾಣಗಳಲ್ಲಿ ದತ್ತಾಂಶ ಕೇಂದ್ರ ಸ್ಥಾಪಿಸಲಾಗಿದೆ. 6,776 ಕಿಲೋ ಮೀಟರ್ ಮಾರ್ಗದಲ್ಲಿ ಹಳಿ ಪಕ್ಕದ ಸಾಧನ – ಸಲಕರಣೆ ಅಳವಡಿಸುವಿಕೆ ಕಾರ್ಯ ಪೂರ್ಣಗೊಂಡಿದೆ” ಎಂದು ಮಾಹಿತಿ ನೀಡಿದರು.

ಅಂತರ್ಜಾಲ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಅಭಿಯಾನದಡಿ ಅಂತರ್ಜಾಲ ಸೌಲಭ್ಯ ವಿಸ್ತರಣೆ, ಕಡಿಮೆ ದರದಲ್ಲಿ ಅಂತರ್ಜಾಲ ಒದಗಿಸುವುದು ಹಾಗೂ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ” ಎಂದರು.

ಇದನ್ನೂ ಓದಿ: 

“2014ರಲ್ಲಿ ದೇಶದಲ್ಲಿ ಕೇವಲ 25 ಕೋಟಿ ಅಂತರ್ಜಾಲ ಬಳಕೆದಾರರಿದ್ದು, ಪ್ರಸ್ತುತ 103 ಕೋಟಿಗೂ ಹೆಚ್ಚು ನಾಗರಿಕರು ಅಂತರ್ಜಾಲ ಬಳಸುತ್ತಿದ್ದಾರೆ. ಅಂತರ್ಜಾಲ ದರ ಜಗತ್ತಿನಲ್ಲೇ ಭಾರತದಲ್ಲಿ ಅತಿ ಕಡಿಮೆ ಇದ್ದು, ಪ್ರತಿ ಒಂದು ಜಿಬಿ ಅಂತರ್ಜಾಲದ ಜಾಗತಿಕ ಸರಾಸರಿ ದರ 2.59 ಡಾಲರ್ ಇದ್ದರೆ, ಭಾರತದಲ್ಲಿ 0.08 ಡಾಲರ್ ಇದೆ. ಕೃತಕ ಬುದ್ಧಿಮತ್ತೆ – ಎಐ ತಂತ್ರಜ್ಞಾನದಲ್ಲಿ ಭಾರತ ಅಗ್ರ ಮೂರು ರಾಷ್ಟ್ರಗಳ ಪೈಕಿ ಒಂದಾಗಿದ್ದು, ದೇಶೀಯವಾಗಿ ಅಭಿವೃದ್ಧಿಪಡಿಸಿರುವ ‘ಸರ್ವಂ’ ಸೂಪರ್ ಕಂಪ್ಯೂಟರ್ ಜಾಗತಿಕ ಅತ್ಯುತ್ತಮ ಮಾದರಿ ಎನಿಸಿದೆ” ಎಂದು ವಿವರಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

10 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

14 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

14 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

14 hours ago