Featured

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ

ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ ಪ್ರಯಾಣಿಸುವವರ ವಿರುದ್ಧ ಕೊಂಕಣ ರೈಲ್ವೇ ವತಿಯಿಂದ ವ್ಯಾಪಕ ತಪಾಸಣ ಕಾರ್ಯಾಚರಣೆ ಮುಂದುವರಿದಿದ್ದು, 2026ರ ಎಪ್ರಿಲ್‌ನಲ್ಲಿ 934 ವಿಶೇಷ ಟಿಕೆಟ್ ತಪಾಸಣ ಕಾರ್ಯಾಚರಣೆ ನಡೆಸಿ ಸುಮಾರು 37 ಸಾವಿರ ಅನಧಿಕೃತ ಹಾಗೂ ಅಕ್ರಮ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಇವರಿಂದ 2.90 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ.

2025-26 ಆರ್ಥಿಕ ವರ್ಷದಲ್ಲಿ ಒಟ್ಟು 11,394 ವಿಶೇಷ ತಪಾಸಣ ಕಾರ್ಯಾಚರಣೆ ನಡೆಸಲಾಗಿದೆ. ಈ ಅವಧಿಯಲ್ಲಿ 4,99,675 ಅನಧಿಕೃತ ಪ್ರಯಾಣ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 27.68 ಕೋಟಿ ದಂಡ ವಸೂಲಿ ಮಾಡಲಾಗಿದೆ. ಬೇಸಗೆ ರಜೆ ಹಾಗೂ ಮುಂಗಾರಿನ ಅವಧಿಯಲ್ಲಿ ಪ್ರವಾಸಿಗರ ಸಂಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಪಾಸಣೆ ಮತ್ತಷ್ಟು ತೀವ್ರಗೊಳ್ಳಲಿದೆ. ರೈಲ್ವೆ ರಕ್ಷಣ ಪಡೆ ಹಾಗೂ ರೈಲ್ವೆ ಅಧಿಕಾರಿಗಳ ಸಹಯೋಗದಲ್ಲಿ ಸಂಪೂರ್ಣ ಕೊಂಕಣ ಮಾರ್ಗದಲ್ಲಿ ವಿಶೇಷ ತಪಾಸಣ ಕಾರ್ಯಾಚರಣೆ ನಡೆಯಲಿದೆ.

ಇದನ್ನೂ ಓದಿ:

ಪ್ರಯಾಣಿಕರು ಅಧಿಕೃತ ಟಿಕೆಟ್‌ಗಳೊಂದಿಗೆ ಪ್ರಯಾಣ ಮಾಡುವಂತೆ ಕೊಂಕಣ ರೈಲ್ವೇ ಮನವಿ ಮಾಡಿದೆ.

Vishwa News 24

Recent Posts

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

12 minutes ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

54 minutes ago

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ – vishwanews24

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ…

1 hour ago

ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ – vishwanews24

ಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ ಬೆಂಗಳೂರು: ಡಿಕೆ ಶಿವಕುಮಾರ್‌ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ.…

1 hour ago

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ – vishwanews24

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…

20 hours ago

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ – vishwanews24

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…

21 hours ago