ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ ಪ್ರಯಾಣಿಸುವವರ ವಿರುದ್ಧ ಕೊಂಕಣ ರೈಲ್ವೇ ವತಿಯಿಂದ ವ್ಯಾಪಕ ತಪಾಸಣ ಕಾರ್ಯಾಚರಣೆ ಮುಂದುವರಿದಿದ್ದು, 2026ರ ಎಪ್ರಿಲ್ನಲ್ಲಿ 934 ವಿಶೇಷ ಟಿಕೆಟ್ ತಪಾಸಣ ಕಾರ್ಯಾಚರಣೆ ನಡೆಸಿ ಸುಮಾರು 37 ಸಾವಿರ ಅನಧಿಕೃತ ಹಾಗೂ ಅಕ್ರಮ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಇವರಿಂದ 2.90 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ.
2025-26 ಆರ್ಥಿಕ ವರ್ಷದಲ್ಲಿ ಒಟ್ಟು 11,394 ವಿಶೇಷ ತಪಾಸಣ ಕಾರ್ಯಾಚರಣೆ ನಡೆಸಲಾಗಿದೆ. ಈ ಅವಧಿಯಲ್ಲಿ 4,99,675 ಅನಧಿಕೃತ ಪ್ರಯಾಣ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 27.68 ಕೋಟಿ ದಂಡ ವಸೂಲಿ ಮಾಡಲಾಗಿದೆ. ಬೇಸಗೆ ರಜೆ ಹಾಗೂ ಮುಂಗಾರಿನ ಅವಧಿಯಲ್ಲಿ ಪ್ರವಾಸಿಗರ ಸಂಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಪಾಸಣೆ ಮತ್ತಷ್ಟು ತೀವ್ರಗೊಳ್ಳಲಿದೆ. ರೈಲ್ವೆ ರಕ್ಷಣ ಪಡೆ ಹಾಗೂ ರೈಲ್ವೆ ಅಧಿಕಾರಿಗಳ ಸಹಯೋಗದಲ್ಲಿ ಸಂಪೂರ್ಣ ಕೊಂಕಣ ಮಾರ್ಗದಲ್ಲಿ ವಿಶೇಷ ತಪಾಸಣ ಕಾರ್ಯಾಚರಣೆ ನಡೆಯಲಿದೆ.
ಇದನ್ನೂ ಓದಿ:
ಪ್ರಯಾಣಿಕರು ಅಧಿಕೃತ ಟಿಕೆಟ್ಗಳೊಂದಿಗೆ ಪ್ರಯಾಣ ಮಾಡುವಂತೆ ಕೊಂಕಣ ರೈಲ್ವೇ ಮನವಿ ಮಾಡಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…