Featured

ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ  – Vishwanews24

ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ

ಚಿಕ್ಕೋಡಿ: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು  ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಬೋ… ಮಗನೇ ಎಂದು ಹೀನಾಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾಂಗಲೋರ್‌ ಅಲ್ಲ ಇನ್ನು ಮುಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – Vishwanews24

ನನಗೆ 4-5 ಕಾಲ್‌ಗಳ ಮೂಲಕ ಬೆದರಿಕೆ ಕರೆಗಳು ಬಂದಿವೆ. ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್‌ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇಂತಹ ಬೆದರಿಕೆ ಕರೆಗಳು ನನಗೆ ಬಂದಿರುವುದು ಮೊದಲೇನಲ್ಲ. ಈ ರೀತಿ ಬೆದರಿಕೆ ಹಾಕುವುದನ್ನು ಬಿಡಿ, ನಾನು ಇದಕ್ಕೆಲ್ಲ ಹೆದರುವುದಿಲ್ಲ. 10-15 ವರ್ಷಗಳಿಂದ ಬೆದರಿಕೆ ಕರೆಗಳನ್ನು ಸ್ವೀಕಾರ ಮಾಡಿಕೊಂಡು ಸಂಘಟನೆಯನ್ನು ಮುನ್ನಡೆಸಿದ್ದೇನೆ. ಇಂತಹ ಕುಕೃತ್ಯವನ್ನು ಬಿಟ್ಟು ನ್ಯಾಯಯುತವಾಗಿ ಬದುಕುವುದನ್ನು ಕಲಿಯಿರಿ ಎಂದಿದ್ದಾರೆ.

ಮಂಗಳೂರು: ನೀರು ಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ.. 10 ಕಿ.ಮೀ ವ್ಯಾಪ್ತಿಯನ್ನ ಜಾಗೃತ ವಲಯ ಘೋಷಿಸಿದ ಜಿಲ್ಲಾಡಳಿತ..Vishwanews24

Vishwa News 24

Recent Posts

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …

8 minutes ago

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ   ಉಡುಪಿ : 2026 ನೇ ಸಾಲಿನ…

28 minutes ago

ಉಡುಪಿ: ಯುವತಿ ನಾಪತ್ತೆ – vishwanews24

ಉಡುಪಿ: ಯುವತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್…

45 minutes ago

ಉಡುಪಿ : ಏ. 17 ರಂದು ನೇರ ಸಂದರ್ಶನ – vishwanews24

ಉಡುಪಿ : ಏ. 17 ರಂದು ನೇರ ಸಂದರ್ಶನ      ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ…

56 minutes ago

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು – vishwanews24

ಉಡುಪಿ  : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು   ಉಡುಪಿ : ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ…

1 hour ago

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

22 hours ago