ಮಡಿಕೇರಿ : ಹಂದಿಸಾಕಾಣಿಕೆಗೆ ಮುಂದಾಗಿದ್ದ ಯುವ ರೈತ ಉದ್ಯಮಿಗಳಿಗೆ ಆಫ್ರಿಕನ್ ಹಂದಿ ಜ್ವರ ಬರಸಿಡಿಲಿನಂತೆ ಎರಗಿದ್ದು, ಹಂದಿಗಳ ಮಾರಣ ಹೋಮವೇ ನಡೆದು ಹೋಗಿದೆ.
ಮಡಿಕೇರಿಯಲ್ಲಿ ಈಗ ಆಫ್ರಿಕನ್ ಹಂದಿಜ್ವರದ ಟೆನ್ಷನ್ ಶುರುವಾಗಿದೆ. ಕಳೆದ 2 ತಿಂಗಳ ಅವಧಿಯಲ್ಲೇ ಇಲ್ಲಿನ ಗಾಳಿಬೀಡು ಗ್ರಾಮದ ಪ್ರಶಾಂತ್ ಮತ್ತು ಗಣಪತಿ ಎಂಬವರ ಹಂದಿ ಸಾಕಾಣಿಕೆ ಕೇಂದ್ರದಲ್ಲಿ 30ಕ್ಕೂ ಹೆಚ್ಚು ಹಂದಿಗಳು ಈ ಮಾರಕ ರೋಗಕ್ಕೆ ಬಲಿಯಾಗಿವೆ.
ಇದರಿಂದ ಹಂದಿ ಸಾಗಾಣಿಕೆ ಕೇಂದ್ರಗಳು, ಸುತ್ತಮತ್ತಲ ರೈತರಲ್ಲಿ ಆತಂಕ ಎದುರಾಗಿದೆ.ಹೌದು. ಮೊದಲಿಗೆ ಹಂದಿಗಳ ಸರಣಿ ಸಾವು ಕಂಡ ಪಶು ವೈದ್ಯಕೀಯ ಇಲಾಖೆ ಅವುಗಳ ಸ್ಯಾಂಪಲ್ ಸಂಗ್ರಹಿಸಿ ಹೈದರಾಬಾದಿಗೆ ಕಳುಹಿಸಿತ್ತು.
ಇರಾನ್ ಮಸೀದಿ ಮೇಲೆ ಉಗ್ರರ ದಾಳಿ.. 15 ಮಂದಿ ಸಾವು , 40ಕ್ಕೂ ಹೆಚ್ಚು ಮಂದಿ ಗಾಯ – Vishwanews24
ಬಳಿಕ ಹೈದರಾಬಾದ್ ಲ್ಯಾಬಿನಲ್ಲಿ ಅದನ್ನ ಪರೀಕ್ಷೆಗೆ ಒಳಪಡಿಸಿದಾಗ ಸಾವನ್ನಪ್ಪಿದ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಆದ್ರೆ ಲ್ಯಾಬ್ ರಿಪೋರ್ಟ್ (Lab Report) ಬರುವಷ್ಟರಲ್ಲಿ ಗಣಪತಿ ಅವರ ಎಲ್ಲಾ 21 ಹಂದಿಗಳು ಮೃತಪಟ್ಟಿದ್ವು. ಇನ್ನು ಪ್ರಶಾಂತ್ ಅವರು ತಮ್ಮ ಹಂದಿಗಳಿಗೆ ವ್ಯಾಕ್ಸಿನ್ ಕೊಡಿಸಿದ್ರು 9ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿವೆ. ಇದರಿಂದ ಲಕ್ಷಾಂತರ ರೂಪಾಯಿ ಲಾಸ್ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಇನ್ನು ಈ ಗ್ರಾಮದಲ್ಲಿ ಐದಾರು ವರ್ಷಗಳಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿದ್ದ ರೈತರು ಮಾರಾಟಕ್ಕೆ ಸಿದ್ಧವಾಗಿದ್ದ ಹಂದಿಗಳ ಸಾವಿನಿಂದ ಕಂಗಾಲಾಗಿದ್ದಾರೆ. ಅತ್ತ ಆಪ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆ ಮತ್ತಷ್ಟು ರೋಗ ಹರಡದಂತೆ ತಡೆಯಲು ಕೊಡಗು ಜಿಲ್ಲಾಡಳಿತ ಮುಂದಾಗಿದೆ. ಹಂದಿ ಸಾಕಾಣಿಕಾ ಕೇಂದ್ರದ 1 ಕಿಲೋ ಮೀಟರ್ ವ್ಯಾಪ್ತಿ ರೋಗ ಪೀಡಿತ ವಲಯವೆಂದು ಘೋಷಣೆ ಮಾಡಿದ್ದು, ಸೋಂಕಿಗೆ ತುತ್ತಾದ ಹಂದಿಗಳ ವೈಜ್ಞಾನಿಕ ವಧೆ, ಸಂಸ್ಕಾರಕ್ಕೆ ಸೂಚನೆ ನೀಡಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…