Featured

ಕೊಡಗಿನಲ್ಲಿ ಕಾಣಿಸಿಕೊಂಡ ಆಫ್ರಿಕನ್ ವೈರಸ್ : 30ಕ್ಕೂ ಹೆಚ್ಚು ಹಂದಿಗಳ ಬಲಿ – Vishwanews24

ಕೊಡಗಿನಲ್ಲಿ ಕಾಣಿಸಿಕೊಂಡ ಆಫ್ರಿಕನ್ ವೈರಸ್ : 30ಕ್ಕೂ ಹೆಚ್ಚು ಹಂದಿಗಳ ಬಲಿ

ಮಡಿಕೇರಿ : ಹಂದಿಸಾಕಾಣಿಕೆಗೆ ಮುಂದಾಗಿದ್ದ ಯುವ ರೈತ ಉದ್ಯಮಿಗಳಿಗೆ ಆಫ್ರಿಕನ್ ಹಂದಿ ಜ್ವರ ಬರಸಿಡಿಲಿನಂತೆ ಎರಗಿದ್ದು, ಹಂದಿಗಳ ಮಾರಣ ಹೋಮವೇ ನಡೆದು ಹೋಗಿದೆ.

ಮಡಿಕೇರಿಯಲ್ಲಿ ಈಗ ಆಫ್ರಿಕನ್ ಹಂದಿಜ್ವರದ ಟೆನ್ಷನ್ ಶುರುವಾಗಿದೆ. ಕಳೆದ 2 ತಿಂಗಳ ಅವಧಿಯಲ್ಲೇ ಇಲ್ಲಿನ ಗಾಳಿಬೀಡು ಗ್ರಾಮದ ಪ್ರಶಾಂತ್ ಮತ್ತು ಗಣಪತಿ ಎಂಬವರ ಹಂದಿ ಸಾಕಾಣಿಕೆ ಕೇಂದ್ರದಲ್ಲಿ 30ಕ್ಕೂ ಹೆಚ್ಚು ಹಂದಿಗಳು ಈ ಮಾರಕ ರೋಗಕ್ಕೆ ಬಲಿಯಾಗಿವೆ.

ಇದರಿಂದ ಹಂದಿ ಸಾಗಾಣಿಕೆ ಕೇಂದ್ರಗಳು, ಸುತ್ತಮತ್ತಲ ರೈತರಲ್ಲಿ ಆತಂಕ ಎದುರಾಗಿದೆ.ಹೌದು. ಮೊದಲಿಗೆ ಹಂದಿಗಳ ಸರಣಿ ಸಾವು ಕಂಡ ಪಶು ವೈದ್ಯಕೀಯ ಇಲಾಖೆ ಅವುಗಳ ಸ್ಯಾಂಪಲ್ ಸಂಗ್ರಹಿಸಿ ಹೈದರಾಬಾದಿಗೆ ಕಳುಹಿಸಿತ್ತು.

ಇರಾನ್ ಮಸೀದಿ ಮೇಲೆ ಉಗ್ರರ ದಾಳಿ.. 15 ಮಂದಿ ಸಾವು , 40ಕ್ಕೂ ಹೆಚ್ಚು ಮಂದಿ ಗಾಯ – Vishwanews24

ಬಳಿಕ ಹೈದರಾಬಾದ್ ಲ್ಯಾಬಿನಲ್ಲಿ ಅದನ್ನ ಪರೀಕ್ಷೆಗೆ ಒಳಪಡಿಸಿದಾಗ ಸಾವನ್ನಪ್ಪಿದ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಆದ್ರೆ ಲ್ಯಾಬ್ ರಿಪೋರ್ಟ್ (Lab Report) ಬರುವಷ್ಟರಲ್ಲಿ ಗಣಪತಿ ಅವರ ಎಲ್ಲಾ 21 ಹಂದಿಗಳು ಮೃತಪಟ್ಟಿದ್ವು. ಇನ್ನು ಪ್ರಶಾಂತ್ ಅವರು ತಮ್ಮ ಹಂದಿಗಳಿಗೆ ವ್ಯಾಕ್ಸಿನ್ ಕೊಡಿಸಿದ್ರು 9ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿವೆ. ಇದರಿಂದ ಲಕ್ಷಾಂತರ ರೂಪಾಯಿ ಲಾಸ್ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಈ ಗ್ರಾಮದಲ್ಲಿ ಐದಾರು ವರ್ಷಗಳಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿದ್ದ ರೈತರು ಮಾರಾಟಕ್ಕೆ ಸಿದ್ಧವಾಗಿದ್ದ ಹಂದಿಗಳ ಸಾವಿನಿಂದ ಕಂಗಾಲಾಗಿದ್ದಾರೆ. ಅತ್ತ ಆಪ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆ ಮತ್ತಷ್ಟು ರೋಗ ಹರಡದಂತೆ ತಡೆಯಲು ಕೊಡಗು ಜಿಲ್ಲಾಡಳಿತ ಮುಂದಾಗಿದೆ. ಹಂದಿ ಸಾಕಾಣಿಕಾ ಕೇಂದ್ರದ 1 ಕಿಲೋ ಮೀಟರ್ ವ್ಯಾಪ್ತಿ ರೋಗ ಪೀಡಿತ ವಲಯವೆಂದು ಘೋಷಣೆ ಮಾಡಿದ್ದು, ಸೋಂಕಿಗೆ ತುತ್ತಾದ ಹಂದಿಗಳ ವೈಜ್ಞಾನಿಕ ವಧೆ, ಸಂಸ್ಕಾರಕ್ಕೆ ಸೂಚನೆ ನೀಡಿದೆ.

ಉಡುಪಿ: ಸುರತ್ಕಲ್ ಟೋಲ್, ಹೆಜಮಾಡಿಯೊಂದಿಗೆ ವಿಲೀನ.. ಎರಡು ಟೋಲ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡ್ತಾರೆ : ಸೊರಕೆ ಅರೋಪ – Vishwanews24

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago