ಮಡಿಕೇರಿ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ಕೊಡಗಿನಲ್ಲೆ ಇರುವುದು ಗೊತ್ತಾಗಿದೆ.
ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಿಂದ 5.2 ಕಿ.ಮೀ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕ 3.0ರಷ್ಟು ಭೂಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ. ಸುಮಾರು 50 ಕಿ.ಮೀ ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ ವಸ್ತುಗಳು ಅಲುಗಾಡಬಹುದು. ಜನತೆ ಗಾಬರಿ ಆಗುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.
ಈ ಭೂಕಂಪದ ಅನುಭವ ತಮಗೇನಾದರೂ ಆದರೆ ಹಾಗೂ ಭೂಮಿಯಲ್ಲಿ ಬಿರುಕುಗಳು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272-221077, 221099 ಕರೆ ಮಾಡಿ ಮಾಹಿತಿ ಕೊಡಬೇಕೆಂದು ಮನವಿ ಮಾಡಿದೆ.
ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…