Featured

ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಜನ – Vishwanews24

ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಜನ

ಮಡಿಕೇರಿ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ಕೊಡಗಿನಲ್ಲೆ ಇರುವುದು ಗೊತ್ತಾಗಿದೆ‌.

ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಿಂದ 5.2  ಕಿ.ಮೀ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕ 3.0ರಷ್ಟು ಭೂಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ‌ ಕೇಂದ್ರ ತಿಳಿಸಿದೆ.

ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ.  ಸುಮಾರು 50 ಕಿ.ಮೀ ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ‌ ವಸ್ತುಗಳು ಅಲುಗಾಡಬಹುದು. ಜನತೆ ಗಾಬರಿ ಆಗುವ‌ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.

ಈ‌ ಭೂಕಂಪದ ಅನುಭವ ತಮಗೇನಾದರೂ ಆದರೆ ಹಾಗೂ ಭೂಮಿಯಲ್ಲಿ ಬಿರುಕುಗಳು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272-221077, 221099  ಕರೆ ಮಾಡಿ ಮಾಹಿತಿ ಕೊಡಬೇಕೆಂದು ಮನವಿ ಮಾಡಿದೆ‌‌.

ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ವಿವಿಧ ಕಡೆ  7.45 ಕ್ಕೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.‌

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

2 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

2 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 days ago