Featured

ಕೊಡಗು ಮೂಲದ ಎಂ.ಎ. ಗಣಪತಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ ಮಹಾ ನಿರ್ದೇಶಕರಾಗಿ ನೇಮಕ -Vishwanews24

ಕೊಡಗು ಮೂಲದ ಐಪಿಎಸ್ ಅಧಿಕಾರಿ ಎಂ.ಎ. ಗಣಪತಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ ಮಹಾನಿರ್ದೇಶಕರಾಗಿ ನೇಮಕ -Vishwanews24

ನವದೆಹಲಿ: ಕರ್ನಾಟಕದ ಕೊಡಗು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಎಂ ಎ ಗಣಪತಿ ಅವರನ್ನು ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್‌ಎಸ್‌ಜಿ) ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿಯು ಗಣಪತಿ ಅವರ ನೇಮಕಾತಿಗೆ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಮಂಗಳವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24

ಇದೇವೇಳೆ, ಪಶ್ಚಿಮ ಬಂಗಾಳದ ಕೇಡರ್‌ನ 1986 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಲದೀಪ್ ಸಿಂಗ್ ಅವರನ್ನು ಸಿಆರ್‌ಪಿಎಫ್ ಮಹಾನಿರ್ದೇಶಕರಾಗಿ ಕ್ಯಾಬಿನೆಟ್ ನೇಮಕಾತಿ ಸಮಿತಿಯು ನೇಮಕ ಮಾಡಿದೆ. ಪ್ರಸ್ತುತ ಅವರು ಸಿಆರ್‌ಪಿಎಫ್‌ನ ವಿಶೇಷ ಡಿಜಿ ಆಗಿದ್ದಾರೆ.

ಎನ್‌ಎಸ್‌ಜಿ ಮಹಾನಿರ್ದೇಶಕರಾಗಿ ನೇಮಕವಾಗಿರುವ ಗಣಪತಿ ಅವರು ಪ್ರಸ್ತುತ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿಯ ಮಹಾನಿರ್ದೇಶಕರಾಗಿದ್ದಾರೆ.

57 ವರ್ಷದ 1986 ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾಗಿರುವ ಗಣಪತಿ, ಕರ್ನಾಟಕದ ಕೊಡಗು ಮೂಲದವರಾಗಿದ್ದಾರೆ. ಉತ್ತರಾಖಂಡದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ :ಕಾಪು : ಮಾರ್ಚ್ 23 ಸುಗ್ಗಿ ಮಾರಿಪೂಜೆಯಂದು ಶಿಲಾಸೇವೆ ಸಮರ್ಪಣಾ ಸಮಾರಂಭ: ಕೆ ವಾಸುದೇವ ಶೆಟ್ಟಿ -Vishwanews24

ಈ ಹಿಂದೆ ಅವರು ಗೃಹ ಸಚಿವಾಲಯದಲ್ಲಿ (ಎಂಎಚ್‌ಎ) ಆಂತರಿಕ ಭದ್ರತೆ ಮತ್ತು ಎಡಪಂಥೀಯ ಉಗ್ರವಾದದಂತಹ ಚಟುವಟಿಕೆಗಳನ್ನು ಹತ್ತಿಕ್ಕುವ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ, ಗೃಹ ಸಚಿವಾಲಯದ ವಕ್ತಾರರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (ಜೆಎನ್‌ಯು) ಸ್ನಾತಕೋತ್ತರ ಪದವಿ ಪಡೆದ ನಂತರ 1986 ರಲ್ಲಿ ಉತ್ತರಪ್ರದೇಶದಲ್ಲಿ ಐಪಿಎಸ್‌ಗೆ ಸೇರಿದರು. ಉತ್ತರ ಪ್ರದೇಶ ವಿಭಜನೆಯ ನಂತರ ಅವರನ್ನು ಉತ್ತರಾಖಂಡ ಕೇಡರ್‌ಗೆ ವರ್ಗಾಯಿಸಲಾಯಿತು.

ಗಣಪತಿ ಅವರು ಐಪಿಎಸ್ ಅಧಿಕಾರಿಯಾಗಿ 30 ವರ್ಷಗಳ ತಮ್ಮ ಸುದೀರ್ಘ ಸೇವಾವಧಿಯಲ್ಲಿ, ಮೊರಾದಾಬಾದ್ ನಗರ, ಸೋನೆಭದ್ರ ಮತ್ತು ಹಾರ್ಡೊಯ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ನೈನಿತಾಲ್, ಮೀರತ್ ಮತ್ತು ಕಾನ್ಪುರದಲ್ಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

14 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago