Featured

ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು – Vishwanews24

ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು

ಕೊಡಗು: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.

ಕೀರ್ತನ್ (12) ಮೃತ ದುರ್ದೈವಿ. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಕೀರ್ತನ್‌ ಓದುತ್ತಿದ್ದ ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ ತಂದೆ ಮಂಜಾಚಾರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ತಡರಾತ್ರಿ ಕೀರ್ತನ್ ಮಲಗಿದ್ದ ಜಾಗದಿಂದಲೇ ಎರಡು ಬಾರಿ ಎದೆ ನೋವು ಎಂದು ಕಿರುಚಿಕೊಂಡಿದ್ದ. ಇದರಿಂದಾಗಿ ಗಾಬರಿಗೊಂಡ ಆತನ ಪೋಷಕರು ತಕ್ಷಣವೇ ಕುಶಾಲನಗರ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಕೀರ್ತನ್‌ ಆ ವೇಳೆಗೆ ಮೃತಪಟ್ಟಿದ್ದ. ಇತ್ತೀಚೆಗೆ ಪುಟ್ಟ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪಿರುವ ಪ್ರಕರಣ ಹೆಚ್ಚಾಗುತ್ತಿದ್ದು ಆತಂಕ ಮೂಡಿಸುತ್ತಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago