ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಮಾದಲ್ಲಿ ಘಟನೆ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿ. ಮೀನಾ ಮೃತ ವಿದ್ಯಾರ್ಥಿನಿ.
ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಈ ಖುಷಿ ಹೆಚ್ಚು ಹೊತ್ತು ಇರಲಿಲ್ಲ.
ಸೂರ್ಯ ಮುಳುಗುತ್ತಿದ್ದ ಹಾಗೇ ವಿದ್ಯಾರ್ಥಿನಿಯ ಜೀವ ಕೂಡ ಅಂತ್ಯವಾಗಿದೆ. ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದಿದ್ದಾನೆ.
ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಮಾಡಲಾಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತಿವ್ರ ಶೋಧ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…