Featured

ಕೊಡೈಕನಲ್ ಪ್ರವಾಸಕ್ಕೆ ತೆರಳಿದ್ದ ಯುವಕ ರೈಲಿನಡಿಗೆ ಬಿದ್ದು ಸಾವು

ಬೆಳ್ಮಣ್‌: ಕೊಡೈಕನಾಲ್‌ಪ್ರವಾಸ ಮುಗಿಸಿ ರೈಲಿನಲ್ಲಿ ಮಂಗಳವಾರ ಮುಂಜಾನೆ ವಾಪಸಾಗುತ್ತಿದ್ದ ಯುವಕರ ತಂಡದಲ್ಲಿದ್ದ ಮುಂಡ್ಕೂರಿನ ಶೈಲೇಶ್‌ ರಾವ್‌ (25) ಅವರು ವಡಗರ ರೈಲು ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ.

ದುಬೈನಿಂದ ಇತ್ತಿಚೆಗಷ್ಟೇ ಬಂದಿದ್ದ ಶೈಲೇಶ್ ರಾವ್ ತನ್ನ ಕಾಲೇಜಿನ ಮೂವರು ಮಿತ್ರರ ಜತೆ ಕೊಡೈಕನಲ್‌ಗೆ ಪ್ರವಾಸಕ್ಕೆ ತೆರಳಿದ್ದರು. ಕೊಡೈಕನಲ್‌ನಿಂದ ಕೇರಳ ಮೂಲಕ ರೈಲಿನಲ್ಲಿ ವಾಪಾಸಾಗುತ್ತಿದ್ದಾಗ ಮಂಗಳವಾರ ಮುಂಜಾನೆ 2.30ರ ಸುಮಾರಿಗೆ ಬಡಾಗರ್ ಸ್ಟೇಷನ್‌ನಲ್ಲಿ ಕುಡಿಯುವ ನೀರಿಗಾಗಿ ಶೈಲೇಶ್ ರೈಲಿನಿಂದ ಇಳಿದಿದ್ದಾರೆ. ಈ ಸಂದರ್ಭ ರೈಲು ಬಿಟ್ಟಿತೆಂಬ ಅವಸರದಲ್ಲಿ ಹತ್ತಲು ಪ್ರಯತ್ನಿಸಿ ಆಯ ತಪ್ಪಿ ರೈಲಿನಡಿಗೆ ಸಿಕ್ಕಿ ಮೃತ ಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮುಂಡ್ಕೂರಿನ ಕಂಗುಳಿಯ ಪಾಕ ಶಾಸ್ತ್ರಜ್ಞ ಯೋಗೀಶ್‌ ಭಟ್‌ ಹಾಗೂ ರೇಖಾ ರಾವ್‌ ದಂಪತಿ ಪುತ್ರನಾದ ಶೈಲೇಶ್‌ ಅವರು ನಿಟ್ಟೆ  ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್‌ ಡಿಪ್ಲೊಮಾ ಪಡೆದು ಮೂರು ವರ್ಷಗಳಿಂದ ದುಬಾೖಯಲ್ಲಿ ಉದ್ಯೋಗದಲ್ಲಿದ್ದರು. 15 ದಿನಗಳ ಹಿಂದೆ ಊರಿಗೆ ಬಂದಿದ್ದ ಅವರು ಎರಡು ವಾರ ಕಳೆದು ವಾಪಸ್‌ ಹೋಗುವವರಿದ್ದರು.

ಶೈಲೇಶ್‌ ಮತ್ತು ಮಿತ್ರರಿದ್ದ ರೈಲು ಮಂಗಳವಾರ ಬೆಳಗ್ಗೆ 7ರ ಹೊತ್ತಿಗೆ ಮಂಗಳೂರು ತಲುಪಿದಾಗಲಷ್ಟೇ ಉಳಿದವರಿಗೆ ಶೈಲೇಶ್‌ ರೈಲಿನಲ್ಲಿರದ ಬಗ್ಗೆ ತಿಳಿಯಿತು. ಕೂಡಲೇ ಆತನ ಮೊಬೈಲಿಗೆ ಕರೆ ಮಾಡಿದಾಗ ವಡಗರ ಸ್ಟೇಷನ್‌ನ ಪೊಲೀಸರು  ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ಮಾಹಿತಿ ನೀಡಿದರು.

vishwanews24
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago