Featured

ಕೊಡೈಕನಲ್ ಪ್ರವಾಸಕ್ಕೆ ತೆರಳಿದ್ದ ಯುವಕ ರೈಲಿನಡಿಗೆ ಬಿದ್ದು ಸಾವು

ಬೆಳ್ಮಣ್‌: ಕೊಡೈಕನಾಲ್‌ಪ್ರವಾಸ ಮುಗಿಸಿ ರೈಲಿನಲ್ಲಿ ಮಂಗಳವಾರ ಮುಂಜಾನೆ ವಾಪಸಾಗುತ್ತಿದ್ದ ಯುವಕರ ತಂಡದಲ್ಲಿದ್ದ ಮುಂಡ್ಕೂರಿನ ಶೈಲೇಶ್‌ ರಾವ್‌ (25) ಅವರು ವಡಗರ ರೈಲು ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ.

ದುಬೈನಿಂದ ಇತ್ತಿಚೆಗಷ್ಟೇ ಬಂದಿದ್ದ ಶೈಲೇಶ್ ರಾವ್ ತನ್ನ ಕಾಲೇಜಿನ ಮೂವರು ಮಿತ್ರರ ಜತೆ ಕೊಡೈಕನಲ್‌ಗೆ ಪ್ರವಾಸಕ್ಕೆ ತೆರಳಿದ್ದರು. ಕೊಡೈಕನಲ್‌ನಿಂದ ಕೇರಳ ಮೂಲಕ ರೈಲಿನಲ್ಲಿ ವಾಪಾಸಾಗುತ್ತಿದ್ದಾಗ ಮಂಗಳವಾರ ಮುಂಜಾನೆ 2.30ರ ಸುಮಾರಿಗೆ ಬಡಾಗರ್ ಸ್ಟೇಷನ್‌ನಲ್ಲಿ ಕುಡಿಯುವ ನೀರಿಗಾಗಿ ಶೈಲೇಶ್ ರೈಲಿನಿಂದ ಇಳಿದಿದ್ದಾರೆ. ಈ ಸಂದರ್ಭ ರೈಲು ಬಿಟ್ಟಿತೆಂಬ ಅವಸರದಲ್ಲಿ ಹತ್ತಲು ಪ್ರಯತ್ನಿಸಿ ಆಯ ತಪ್ಪಿ ರೈಲಿನಡಿಗೆ ಸಿಕ್ಕಿ ಮೃತ ಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮುಂಡ್ಕೂರಿನ ಕಂಗುಳಿಯ ಪಾಕ ಶಾಸ್ತ್ರಜ್ಞ ಯೋಗೀಶ್‌ ಭಟ್‌ ಹಾಗೂ ರೇಖಾ ರಾವ್‌ ದಂಪತಿ ಪುತ್ರನಾದ ಶೈಲೇಶ್‌ ಅವರು ನಿಟ್ಟೆ  ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್‌ ಡಿಪ್ಲೊಮಾ ಪಡೆದು ಮೂರು ವರ್ಷಗಳಿಂದ ದುಬಾೖಯಲ್ಲಿ ಉದ್ಯೋಗದಲ್ಲಿದ್ದರು. 15 ದಿನಗಳ ಹಿಂದೆ ಊರಿಗೆ ಬಂದಿದ್ದ ಅವರು ಎರಡು ವಾರ ಕಳೆದು ವಾಪಸ್‌ ಹೋಗುವವರಿದ್ದರು.

ಶೈಲೇಶ್‌ ಮತ್ತು ಮಿತ್ರರಿದ್ದ ರೈಲು ಮಂಗಳವಾರ ಬೆಳಗ್ಗೆ 7ರ ಹೊತ್ತಿಗೆ ಮಂಗಳೂರು ತಲುಪಿದಾಗಲಷ್ಟೇ ಉಳಿದವರಿಗೆ ಶೈಲೇಶ್‌ ರೈಲಿನಲ್ಲಿರದ ಬಗ್ಗೆ ತಿಳಿಯಿತು. ಕೂಡಲೇ ಆತನ ಮೊಬೈಲಿಗೆ ಕರೆ ಮಾಡಿದಾಗ ವಡಗರ ಸ್ಟೇಷನ್‌ನ ಪೊಲೀಸರು  ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ಮಾಹಿತಿ ನೀಡಿದರು.

vishwanews24
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago