Featured

ಕೊಡೈಕನಲ್ ಪ್ರವಾಸಕ್ಕೆ ತೆರಳಿದ್ದ ಯುವಕ ರೈಲಿನಡಿಗೆ ಬಿದ್ದು ಸಾವು

ಬೆಳ್ಮಣ್‌: ಕೊಡೈಕನಾಲ್‌ಪ್ರವಾಸ ಮುಗಿಸಿ ರೈಲಿನಲ್ಲಿ ಮಂಗಳವಾರ ಮುಂಜಾನೆ ವಾಪಸಾಗುತ್ತಿದ್ದ ಯುವಕರ ತಂಡದಲ್ಲಿದ್ದ ಮುಂಡ್ಕೂರಿನ ಶೈಲೇಶ್‌ ರಾವ್‌ (25) ಅವರು ವಡಗರ ರೈಲು ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ.

ದುಬೈನಿಂದ ಇತ್ತಿಚೆಗಷ್ಟೇ ಬಂದಿದ್ದ ಶೈಲೇಶ್ ರಾವ್ ತನ್ನ ಕಾಲೇಜಿನ ಮೂವರು ಮಿತ್ರರ ಜತೆ ಕೊಡೈಕನಲ್‌ಗೆ ಪ್ರವಾಸಕ್ಕೆ ತೆರಳಿದ್ದರು. ಕೊಡೈಕನಲ್‌ನಿಂದ ಕೇರಳ ಮೂಲಕ ರೈಲಿನಲ್ಲಿ ವಾಪಾಸಾಗುತ್ತಿದ್ದಾಗ ಮಂಗಳವಾರ ಮುಂಜಾನೆ 2.30ರ ಸುಮಾರಿಗೆ ಬಡಾಗರ್ ಸ್ಟೇಷನ್‌ನಲ್ಲಿ ಕುಡಿಯುವ ನೀರಿಗಾಗಿ ಶೈಲೇಶ್ ರೈಲಿನಿಂದ ಇಳಿದಿದ್ದಾರೆ. ಈ ಸಂದರ್ಭ ರೈಲು ಬಿಟ್ಟಿತೆಂಬ ಅವಸರದಲ್ಲಿ ಹತ್ತಲು ಪ್ರಯತ್ನಿಸಿ ಆಯ ತಪ್ಪಿ ರೈಲಿನಡಿಗೆ ಸಿಕ್ಕಿ ಮೃತ ಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮುಂಡ್ಕೂರಿನ ಕಂಗುಳಿಯ ಪಾಕ ಶಾಸ್ತ್ರಜ್ಞ ಯೋಗೀಶ್‌ ಭಟ್‌ ಹಾಗೂ ರೇಖಾ ರಾವ್‌ ದಂಪತಿ ಪುತ್ರನಾದ ಶೈಲೇಶ್‌ ಅವರು ನಿಟ್ಟೆ  ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್‌ ಡಿಪ್ಲೊಮಾ ಪಡೆದು ಮೂರು ವರ್ಷಗಳಿಂದ ದುಬಾೖಯಲ್ಲಿ ಉದ್ಯೋಗದಲ್ಲಿದ್ದರು. 15 ದಿನಗಳ ಹಿಂದೆ ಊರಿಗೆ ಬಂದಿದ್ದ ಅವರು ಎರಡು ವಾರ ಕಳೆದು ವಾಪಸ್‌ ಹೋಗುವವರಿದ್ದರು.

ಶೈಲೇಶ್‌ ಮತ್ತು ಮಿತ್ರರಿದ್ದ ರೈಲು ಮಂಗಳವಾರ ಬೆಳಗ್ಗೆ 7ರ ಹೊತ್ತಿಗೆ ಮಂಗಳೂರು ತಲುಪಿದಾಗಲಷ್ಟೇ ಉಳಿದವರಿಗೆ ಶೈಲೇಶ್‌ ರೈಲಿನಲ್ಲಿರದ ಬಗ್ಗೆ ತಿಳಿಯಿತು. ಕೂಡಲೇ ಆತನ ಮೊಬೈಲಿಗೆ ಕರೆ ಮಾಡಿದಾಗ ವಡಗರ ಸ್ಟೇಷನ್‌ನ ಪೊಲೀಸರು  ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ಮಾಹಿತಿ ನೀಡಿದರು.

vishwanews24
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago