ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ.
ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಇಂದು(ಮಂಗಳವಾರದಿಂದ) ನಗರದ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ತನಕ ಆಳ್ವರಬೆಟ್ಟು ಮನೆಯಲ್ಲಿ ತಂಗಿದ್ದ ಸ್ವಾತಿ ಸೋಮವಾರ ಸಂಜೆ ಮನೆಯಿಂದ ಪಾಂಡೇಶ್ವರದ ಪಿಜಿಗೆ ಬಂದು ತಂಗಿದ್ದರು.
ರಾತ್ರಿ ತಾಯಿ ತಂದೆ ಜತೆಗೆ ಮೊಬೈಲ್ ನಲ್ಲಿ ಮಾತನಾಡಿ ಬಳಿಕ ವಿಪರೀತ ತಲೆನೋವು ಎಂದೇಳಿ ಜತೆಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಫೋನ್ ಕರೆ ಕಟ್ ಮಾಡಿದ್ದರು. ಪಕ್ಕದ ಸಹಪಾಠಿ ಕೂಡ ತಲೆನೋವು ಇರೋದ್ರಿಂದ ತೊಂದರೆ ಕೊಡೋದು ಬೇಡ ಎಂದು ಎಚ್ಚರಿಸಲಿಲ್ಲ ಎನ್ನಲಾಗಿದೆ. ಬೆಳಗ್ಗೆ ದೇಹ ತಣ್ಣಗಾಗಿದ್ದನ್ನು ಕಂಡು ಪಿಜಿ ಸೂಪರ್ ವೈಸರ್ ಮಾಹಿತಿ ನೀಡಿ ತಕ್ಷಣ ಆಂಬ್ಯುಲೆನ್ಸ್ ತರಿಸಿ ವೆನ್ ಲಾಕ್ ಗೆ ದಾಖಲಿಸುವಷ್ಟರಲ್ಲಿ ಸ್ವಾತಿಯ ಪ್ರಾಣಪಕ್ಷಿ ಹಾರಿಹೋಗಿತ್ತು.
ಅವಿವಾಹಿತೆಯಾಗಿರುವ ಸ್ವಾತಿ ಶೆಟ್ಟಿ ಅವರಿಗೆ ಪೋಷಕರು ಈ ವರ್ಷಾಂತ್ಯದೊಳಗೆ ಮದುವೆ ಮಾಡುವ ತಯಾರಿ ನಡೆಸಿದ್ದರು. ಅಪರೂಪಕ್ಕೊಮ್ಮೆ ತಲೆನೋವು ಬಿಟ್ರೆ ಬೇರೆ ಯಾವುದೇ ತೊಂದರೆ ಇರಲಿಲ್ಲ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…