ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ.
ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಇಂದು(ಮಂಗಳವಾರದಿಂದ) ನಗರದ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ತನಕ ಆಳ್ವರಬೆಟ್ಟು ಮನೆಯಲ್ಲಿ ತಂಗಿದ್ದ ಸ್ವಾತಿ ಸೋಮವಾರ ಸಂಜೆ ಮನೆಯಿಂದ ಪಾಂಡೇಶ್ವರದ ಪಿಜಿಗೆ ಬಂದು ತಂಗಿದ್ದರು.
ರಾತ್ರಿ ತಾಯಿ ತಂದೆ ಜತೆಗೆ ಮೊಬೈಲ್ ನಲ್ಲಿ ಮಾತನಾಡಿ ಬಳಿಕ ವಿಪರೀತ ತಲೆನೋವು ಎಂದೇಳಿ ಜತೆಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಫೋನ್ ಕರೆ ಕಟ್ ಮಾಡಿದ್ದರು. ಪಕ್ಕದ ಸಹಪಾಠಿ ಕೂಡ ತಲೆನೋವು ಇರೋದ್ರಿಂದ ತೊಂದರೆ ಕೊಡೋದು ಬೇಡ ಎಂದು ಎಚ್ಚರಿಸಲಿಲ್ಲ ಎನ್ನಲಾಗಿದೆ. ಬೆಳಗ್ಗೆ ದೇಹ ತಣ್ಣಗಾಗಿದ್ದನ್ನು ಕಂಡು ಪಿಜಿ ಸೂಪರ್ ವೈಸರ್ ಮಾಹಿತಿ ನೀಡಿ ತಕ್ಷಣ ಆಂಬ್ಯುಲೆನ್ಸ್ ತರಿಸಿ ವೆನ್ ಲಾಕ್ ಗೆ ದಾಖಲಿಸುವಷ್ಟರಲ್ಲಿ ಸ್ವಾತಿಯ ಪ್ರಾಣಪಕ್ಷಿ ಹಾರಿಹೋಗಿತ್ತು.
ಅವಿವಾಹಿತೆಯಾಗಿರುವ ಸ್ವಾತಿ ಶೆಟ್ಟಿ ಅವರಿಗೆ ಪೋಷಕರು ಈ ವರ್ಷಾಂತ್ಯದೊಳಗೆ ಮದುವೆ ಮಾಡುವ ತಯಾರಿ ನಡೆಸಿದ್ದರು. ಅಪರೂಪಕ್ಕೊಮ್ಮೆ ತಲೆನೋವು ಬಿಟ್ರೆ ಬೇರೆ ಯಾವುದೇ ತೊಂದರೆ ಇರಲಿಲ್ಲ ಎನ್ನಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…