ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ.
ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಇಂದು(ಮಂಗಳವಾರದಿಂದ) ನಗರದ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ತನಕ ಆಳ್ವರಬೆಟ್ಟು ಮನೆಯಲ್ಲಿ ತಂಗಿದ್ದ ಸ್ವಾತಿ ಸೋಮವಾರ ಸಂಜೆ ಮನೆಯಿಂದ ಪಾಂಡೇಶ್ವರದ ಪಿಜಿಗೆ ಬಂದು ತಂಗಿದ್ದರು.
ರಾತ್ರಿ ತಾಯಿ ತಂದೆ ಜತೆಗೆ ಮೊಬೈಲ್ ನಲ್ಲಿ ಮಾತನಾಡಿ ಬಳಿಕ ವಿಪರೀತ ತಲೆನೋವು ಎಂದೇಳಿ ಜತೆಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಫೋನ್ ಕರೆ ಕಟ್ ಮಾಡಿದ್ದರು. ಪಕ್ಕದ ಸಹಪಾಠಿ ಕೂಡ ತಲೆನೋವು ಇರೋದ್ರಿಂದ ತೊಂದರೆ ಕೊಡೋದು ಬೇಡ ಎಂದು ಎಚ್ಚರಿಸಲಿಲ್ಲ ಎನ್ನಲಾಗಿದೆ. ಬೆಳಗ್ಗೆ ದೇಹ ತಣ್ಣಗಾಗಿದ್ದನ್ನು ಕಂಡು ಪಿಜಿ ಸೂಪರ್ ವೈಸರ್ ಮಾಹಿತಿ ನೀಡಿ ತಕ್ಷಣ ಆಂಬ್ಯುಲೆನ್ಸ್ ತರಿಸಿ ವೆನ್ ಲಾಕ್ ಗೆ ದಾಖಲಿಸುವಷ್ಟರಲ್ಲಿ ಸ್ವಾತಿಯ ಪ್ರಾಣಪಕ್ಷಿ ಹಾರಿಹೋಗಿತ್ತು.
ಅವಿವಾಹಿತೆಯಾಗಿರುವ ಸ್ವಾತಿ ಶೆಟ್ಟಿ ಅವರಿಗೆ ಪೋಷಕರು ಈ ವರ್ಷಾಂತ್ಯದೊಳಗೆ ಮದುವೆ ಮಾಡುವ ತಯಾರಿ ನಡೆಸಿದ್ದರು. ಅಪರೂಪಕ್ಕೊಮ್ಮೆ ತಲೆನೋವು ಬಿಟ್ರೆ ಬೇರೆ ಯಾವುದೇ ತೊಂದರೆ ಇರಲಿಲ್ಲ ಎನ್ನಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…