ಕೊಲ್ಕತ್ತಾ: ಕೊನೆಗೂ ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ, ರಾತ್ರೋ ರಾತ್ರಿ ತಲಾಖ್ ಹೇಳಿಬಿಡುತ್ತಾರೆ ಎಂಬ ಭಯ ಈಗಿಲ್ಲ ಎಂದು ಇಶ್ರತ್ ಜಹಾನ್ ಹೇಳಿದ್ದಾರೆ.
ತ್ರಿವಳಿ ತಲಾಖ್ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ಇಶ್ರತ್ ಜಹಾನ್ ಅರ್ಜಿ ಸಲ್ಲಿಸಿದ್ದರು.ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿಕೊಂಡಿದ್ದಾರೆ,
ಕೇಂದ್ರದ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ, ಇದು ಇತಿಹಾಸದಲ್ಲಿ ಬರೆದಿಡುವ ವಿಷಯವಾಗಿದೆ ಎಂದು ಹೇಳಿದ್ದಾರೆ. ಮುಸ್ಲಿಂ ಮಹಿಳೆಯರ ಜೀವನಕ್ಕೆ ಒಂದು ಗೌರವ ಸಿಕ್ಕಿದೆ, ಇದರಿಂದ ಹೊಸ ಅಧ್ಯಾಯ ಬರೆದಂತಾಗಿದೆ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ವಿರೋಧಿಸುವವರಿಗೆ ಈ ಪದ್ಧತಿಯಿಂದಾಗಿ ಬಲಿಪಶುಗಳಾಗುವವರ ಬಗ್ಗೆ ಅರಿವಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜೀವನ ಎಷ್ಟು ಕಷ್ಟ ಎಂಬುದನ್ನು ನಾನು ಅನುಭವಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಇಶ್ರತ್ ಜಹಾನ್ ಬಿಜೆಪಿ ಸೇರಿದ್ದರು. ತಾವು ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮೇಲೆ ನನ್ನ ಸುತ್ತಮುತ್ತಲಿನವರಿಂದ ನನಗೆ ಉತ್ತಮ ಆತಿಥ್ಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…