ಕೊನೆಗೂ ರಾಜಕೀಯ ಸೇರುವ ಗುಟ್ಟು ಬಿಟ್ಟು ಕೊಟ್ಟ ಅಣ್ಣಾಮಲೈ: vishwanews24

ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಣ್ಣಾಮಲೈ

ಬೆಳಗಾವಿ: ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗ ಅವರ ಮುಂದಿನ ನಡೆ ಏನು ಅನ್ನೋ ಬಗ್ಗೆ ಸಾಕಷ್ಟು ಚರ್ಚೆಗಳಾಗಿದ್ದವು.ಅಣ್ಣಾಮಲೈ ರಾಜಕೀಯಕ್ಕೆ ಬರ್ತಾರೆ ಅಂತಲೂ ಹೇಳಲಾಗುತ್ತಿತ್ತು. ಆದ್ರೆ, ಈ ಬಗ್ಗೆ ಯಾವುದೇ ಸ್ಪಷ್ಟತೆ ಇರಲಿಲ್ಲ.ಇದೀಗ ಅಣ್ಣಾಮಲೈ ಅವರು ರಾಜಕೀಯಕ್ಕೆ ಬರೋದು ಪಕ್ಕಾ ಆಗಿದೆ. ಈ ಬಗ್ಗೆ ಖುದ್ದು ಅವರೇ ಮಾತನಾಡಿದ್ದಾರೆ.

ಬೆಳಗಾವಿ ಅನ್ನೋ ಫೇಸ್​ಬುಕ್ ಪೇಜ್​ನ ಲೈವ್​ನಲ್ಲಿ ಮಾತನಾಡುವಾಗ ತಾವು ರಾಜಕೀಯಕ್ಕೆ ಎಂಟ್ರಿ ಕೊಡೋದಾಗಿ ಅಣ್ಣಾಮಲೈ ತಿಳಿಸಿದ್ದಾರೆ. ಸುಮಾರು ಒಂದೂ ಕಾಲು ಗಂಟೆಯ ಲೈವ್​ನಲ್ಲಿ ಆರಂಭದಲ್ಲೇ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.ತಮಿಳುನಾಡಿನಲ್ಲಿ ನಾವೊಂದು ಫೌಂಡೇಷನ್ ಆರಂಭಿಸುತ್ತಿದ್ದೇವೆ. ಇದು ಗ್ರಾಮೀಣ ಭಾಗದಲ್ಲಿ ಲೀಡರ್​ಶಿಪ್​ ಬಗ್ಗೆ ಕಾರ್ಯ ನಿರ್ವಹಿಸಲಿದೆ.

ನಾನು ತಮಿಳುನಾಡು ರಾಜಕೀಯಕ್ಕೂ ಬರುತ್ತಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. 2021ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಅದರಲ್ಲಿ ಸ್ಪರ್ಧಿಸಬೇಕು ಅನ್ನೋ ಇಚ್ಛೆ ಇದೆ. ರಾಜಕೀಯಕ್ಕೆ ಹೋಗಿ ಒಂದಷ್ಟು ಬದಲಾವಣೆ ಮಾಡಬೇಕು ಅಂತಿದೆ.ಇದು ಅಣ್ಣಾಮಲೈ ತಮ್ಮ ಮುಂದಿನ ನಡೆ ಬಗ್ಗೆ ನೀಡಿರುವ ಮಾಹಿತಿ. ಈ ಮೂಲಕ ತಮಗೆ ರಾಜಕೀಯಕ್ಕೆ ಬರುವ ಆಸೆ ಇದೆ ಅಂತ ಹೇಳಿದ್ದಾರೆ.ಅಲ್ಲದೆ, ಮುಂದಿನ ಚುನಾವಣೆಯಲ್ಲಿಯೇ ಸ್ಪರ್ಧಿಸುವ ಬಗ್ಗೆಯೂ ಚಿಂತನೆ ನಡೆಸಿರೋದಾಗಿ ಅವರು ತಿಳಿಸಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

17 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

20 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

20 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

20 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

20 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

21 hours ago