Featured

ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ : ಡಿ.ಕೆ. ಶಿ -Vishwanews24

ನವದೆಹಲಿ: ‘ನನಗೆ ಕಾನೂನಿನ ಮೇಲೆ ಅಪಾರ ಗೌರವ ಇದೆ. ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ’ ಎಂದು ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಯಾವುದೇ ತಪ್ಪು ಮಾಡಿಲ್ಲ. ಅಂತೆಯೇ ಜನಬೆಂಬಲ ದೊರೆತಿದೆ. ಕಷ್ಟಕಾಲದಲ್ಲಿ ಬೆಂಬಲ, ಧೈರ್ಯ ನೀಡಿದವರಿಗೆ ಧನ್ಯವಾದಗಳು’ ಎಂದರು.

‘ಜಾರಿ ನಿರ್ದೇಶನಾಲಯದ (ಇ.ಡಿ)ಸಮನ್ಸ್‌ ರದ್ದತಿ ಕೋರಿ ತಾಯಿ ಹಾಗೂ ಪತ್ನಿ ಸಲ್ಲಿಸಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಇದೇ 30ಕ್ಕೆ ಮುಂದೂಡಿದೆ. ಬೆಂಗಳೂರಿನಲ್ಲೇ ವಿಚಾರಣೆಗೆ ಕೋರಲಾಗಿದೆ. ಎಲ್ಲೇ ವಿಚಾರಣೆ ನಡೆಸಿದರೂ ಉತ್ತರ ನೀಡಲು ನಮ್ಮ ಕುಟುಂಬ ಸಿದ್ಧವಿದೆ’ ಎಂದು ಅವರು ಹೇಳಿದರು.

‘ವಿವಿಧ ಪಕ್ಷಗಳ ಮುಖಂಡರು ನನ್ನನ್ನು ಬೆಂಬಲಿಸಿದ್ದಾರೆ. ಬಂಧನ ಖಂಡಿಸಿ ಕೇರಳದಲ್ಲೂ ಪಂಜಿನ ಮೆರವಣಿಗೆ ನಡೆಸಲಾಗಿದೆ. ಬಂಧನದಲ್ಲಿದ್ದಾಗ ನಿತ್ಯ ನೂರಾರು ಬೆಂಬಲಿಗರು ನೋಡಲು ಬಂದಿದ್ದಾರೆ. ಅವರೇ ನನಗೆ ಶ್ರೀರಕ್ಷೆ’ ಎಂದರು.

‘ನಾನು ಕಾನೂನಿಗೆ ಬದ್ಧನಾಗಿರುವ ವ್ಯಕ್ತಿ. 7 ಬಾರಿ ಶಾಸಕನಾಗಿ, ಸರ್ಕಾರ ದಲ್ಲಿದ್ದು ಕಾನೂನು ರೂಪಿಸುವಲ್ಲಿ ಭಾಗಿಯಾಗಿದ್ದೇನೆ. ಚುನಾವಣಾ ಆಯೋಗದ ನಿಯಮಾನುಸಾರ ನನ್ನ ಆಸ್ತಿ ಘೋಷಿಸಿದ್ದೇನೆ. ಬೇರೆಯವರ ಆಸ್ತಿ ಘೋಷಣೆ, ನನ್ನ ಆಸ್ತಿ ಘೋಷಣೆ ಕುರಿತು ಬೆಂಗಳೂರಿನಲ್ಲಿ ವಿವರವಾಗಿ ಮಾತನಾಡುತ್ತೇನೆ’ ಎಂದು ಅವರು ವಿವರಿಸಿದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

10 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

10 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

11 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

11 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

11 hours ago