Featured

ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ : ಡಿ.ಕೆ. ಶಿ -Vishwanews24

ನವದೆಹಲಿ: ‘ನನಗೆ ಕಾನೂನಿನ ಮೇಲೆ ಅಪಾರ ಗೌರವ ಇದೆ. ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ’ ಎಂದು ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಯಾವುದೇ ತಪ್ಪು ಮಾಡಿಲ್ಲ. ಅಂತೆಯೇ ಜನಬೆಂಬಲ ದೊರೆತಿದೆ. ಕಷ್ಟಕಾಲದಲ್ಲಿ ಬೆಂಬಲ, ಧೈರ್ಯ ನೀಡಿದವರಿಗೆ ಧನ್ಯವಾದಗಳು’ ಎಂದರು.

‘ಜಾರಿ ನಿರ್ದೇಶನಾಲಯದ (ಇ.ಡಿ)ಸಮನ್ಸ್‌ ರದ್ದತಿ ಕೋರಿ ತಾಯಿ ಹಾಗೂ ಪತ್ನಿ ಸಲ್ಲಿಸಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಇದೇ 30ಕ್ಕೆ ಮುಂದೂಡಿದೆ. ಬೆಂಗಳೂರಿನಲ್ಲೇ ವಿಚಾರಣೆಗೆ ಕೋರಲಾಗಿದೆ. ಎಲ್ಲೇ ವಿಚಾರಣೆ ನಡೆಸಿದರೂ ಉತ್ತರ ನೀಡಲು ನಮ್ಮ ಕುಟುಂಬ ಸಿದ್ಧವಿದೆ’ ಎಂದು ಅವರು ಹೇಳಿದರು.

‘ವಿವಿಧ ಪಕ್ಷಗಳ ಮುಖಂಡರು ನನ್ನನ್ನು ಬೆಂಬಲಿಸಿದ್ದಾರೆ. ಬಂಧನ ಖಂಡಿಸಿ ಕೇರಳದಲ್ಲೂ ಪಂಜಿನ ಮೆರವಣಿಗೆ ನಡೆಸಲಾಗಿದೆ. ಬಂಧನದಲ್ಲಿದ್ದಾಗ ನಿತ್ಯ ನೂರಾರು ಬೆಂಬಲಿಗರು ನೋಡಲು ಬಂದಿದ್ದಾರೆ. ಅವರೇ ನನಗೆ ಶ್ರೀರಕ್ಷೆ’ ಎಂದರು.

‘ನಾನು ಕಾನೂನಿಗೆ ಬದ್ಧನಾಗಿರುವ ವ್ಯಕ್ತಿ. 7 ಬಾರಿ ಶಾಸಕನಾಗಿ, ಸರ್ಕಾರ ದಲ್ಲಿದ್ದು ಕಾನೂನು ರೂಪಿಸುವಲ್ಲಿ ಭಾಗಿಯಾಗಿದ್ದೇನೆ. ಚುನಾವಣಾ ಆಯೋಗದ ನಿಯಮಾನುಸಾರ ನನ್ನ ಆಸ್ತಿ ಘೋಷಿಸಿದ್ದೇನೆ. ಬೇರೆಯವರ ಆಸ್ತಿ ಘೋಷಣೆ, ನನ್ನ ಆಸ್ತಿ ಘೋಷಣೆ ಕುರಿತು ಬೆಂಗಳೂರಿನಲ್ಲಿ ವಿವರವಾಗಿ ಮಾತನಾಡುತ್ತೇನೆ’ ಎಂದು ಅವರು ವಿವರಿಸಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago