Featured

ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ : ಡಿ.ಕೆ. ಶಿ -Vishwanews24

ನವದೆಹಲಿ: ‘ನನಗೆ ಕಾನೂನಿನ ಮೇಲೆ ಅಪಾರ ಗೌರವ ಇದೆ. ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ’ ಎಂದು ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಯಾವುದೇ ತಪ್ಪು ಮಾಡಿಲ್ಲ. ಅಂತೆಯೇ ಜನಬೆಂಬಲ ದೊರೆತಿದೆ. ಕಷ್ಟಕಾಲದಲ್ಲಿ ಬೆಂಬಲ, ಧೈರ್ಯ ನೀಡಿದವರಿಗೆ ಧನ್ಯವಾದಗಳು’ ಎಂದರು.

‘ಜಾರಿ ನಿರ್ದೇಶನಾಲಯದ (ಇ.ಡಿ)ಸಮನ್ಸ್‌ ರದ್ದತಿ ಕೋರಿ ತಾಯಿ ಹಾಗೂ ಪತ್ನಿ ಸಲ್ಲಿಸಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಇದೇ 30ಕ್ಕೆ ಮುಂದೂಡಿದೆ. ಬೆಂಗಳೂರಿನಲ್ಲೇ ವಿಚಾರಣೆಗೆ ಕೋರಲಾಗಿದೆ. ಎಲ್ಲೇ ವಿಚಾರಣೆ ನಡೆಸಿದರೂ ಉತ್ತರ ನೀಡಲು ನಮ್ಮ ಕುಟುಂಬ ಸಿದ್ಧವಿದೆ’ ಎಂದು ಅವರು ಹೇಳಿದರು.

‘ವಿವಿಧ ಪಕ್ಷಗಳ ಮುಖಂಡರು ನನ್ನನ್ನು ಬೆಂಬಲಿಸಿದ್ದಾರೆ. ಬಂಧನ ಖಂಡಿಸಿ ಕೇರಳದಲ್ಲೂ ಪಂಜಿನ ಮೆರವಣಿಗೆ ನಡೆಸಲಾಗಿದೆ. ಬಂಧನದಲ್ಲಿದ್ದಾಗ ನಿತ್ಯ ನೂರಾರು ಬೆಂಬಲಿಗರು ನೋಡಲು ಬಂದಿದ್ದಾರೆ. ಅವರೇ ನನಗೆ ಶ್ರೀರಕ್ಷೆ’ ಎಂದರು.

‘ನಾನು ಕಾನೂನಿಗೆ ಬದ್ಧನಾಗಿರುವ ವ್ಯಕ್ತಿ. 7 ಬಾರಿ ಶಾಸಕನಾಗಿ, ಸರ್ಕಾರ ದಲ್ಲಿದ್ದು ಕಾನೂನು ರೂಪಿಸುವಲ್ಲಿ ಭಾಗಿಯಾಗಿದ್ದೇನೆ. ಚುನಾವಣಾ ಆಯೋಗದ ನಿಯಮಾನುಸಾರ ನನ್ನ ಆಸ್ತಿ ಘೋಷಿಸಿದ್ದೇನೆ. ಬೇರೆಯವರ ಆಸ್ತಿ ಘೋಷಣೆ, ನನ್ನ ಆಸ್ತಿ ಘೋಷಣೆ ಕುರಿತು ಬೆಂಗಳೂರಿನಲ್ಲಿ ವಿವರವಾಗಿ ಮಾತನಾಡುತ್ತೇನೆ’ ಎಂದು ಅವರು ವಿವರಿಸಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago