ಕೊಪ್ಪಳ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿರುವ ಚೈತ್ರಾ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕೊಪ್ಪಳದ ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ ಹಣ ಕಳೆದುಕೊಂಡ ಟಿಕೆಟ್ ಆಕಾಂಕ್ಷಿ. ಅವರ ಪತ್ನಿ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸಿದ್ದ ಅವರು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರಿಗೆ 21 ಲಕ್ಷ ರೂ. ನೀಡಿ ಕೈ ಸುಟ್ಟುಕೊಂಡಿದ್ದಾರೆ.
ಆರೋಪಿಗಳು ತಮಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೊತ್ತು, ಆರ್ಎಸ್ಎಸ್ ನಾಯಕರು ಗೊತ್ತು ಎಂದು ತಿಮ್ಮಾರೆಡ್ಡಿಯವರನ್ನು ಪರಿಚಯಿಸಿಕೊಂಡಿದ್ದರು. ಬಳಿಕ ರಾಜ್ಯದಲ್ಲಿ ಸಮೀಕ್ಷೆ ನಡೆಸಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಅವರನ್ನು ನಂಬಿಸಿದ್ದರು. ಬಳಿಕ ಆರೋಪಿಗಳ ಮಾತು ನಂಬಿ ತಿಮ್ಮಾರೆಡ್ಡಿ ಹಣ ನೀಡಿದ್ದರು.
ಈ ಸಂಬಂಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…