Featured

ಕೊಪ್ಪಳದಲ್ಲೂ `ಚೈತ್ರಾ’ ಮಾದರಿ ವಂಚನೆ ಪ್ರಕರಣ ; ಅಮಿತ್ ಶಾ ಹೆಸರು ಹೇಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ – Vishwanews24

ಕೊಪ್ಪಳದಲ್ಲೂ `ಚೈತ್ರಾ’ ಮಾದರಿ ವಂಚನೆ ಪ್ರಕರಣ ; ಅಮಿತ್ ಶಾ ಹೆಸರು ಹೇಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ

ಕೊಪ್ಪಳ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿರುವ ಚೈತ್ರಾ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಕೊಪ್ಪಳದ  ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ  ಹಣ ಕಳೆದುಕೊಂಡ ಟಿಕೆಟ್ ಆಕಾಂಕ್ಷಿ. ಅವರ ಪತ್ನಿ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸಿದ್ದ ಅವರು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರಿಗೆ 21 ಲಕ್ಷ ರೂ. ನೀಡಿ ಕೈ ಸುಟ್ಟುಕೊಂಡಿದ್ದಾರೆ.

ಆರೋಪಿಗಳು ತಮಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೊತ್ತು, ಆರ್‍ಎಸ್‍ಎಸ್ ನಾಯಕರು ಗೊತ್ತು ಎಂದು ತಿಮ್ಮಾರೆಡ್ಡಿಯವರನ್ನು ಪರಿಚಯಿಸಿಕೊಂಡಿದ್ದರು. ಬಳಿಕ ರಾಜ್ಯದಲ್ಲಿ ಸಮೀಕ್ಷೆ ನಡೆಸಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಅವರನ್ನು ನಂಬಿಸಿದ್ದರು. ಬಳಿಕ ಆರೋಪಿಗಳ ಮಾತು ನಂಬಿ ತಿಮ್ಮಾರೆಡ್ಡಿ ಹಣ ನೀಡಿದ್ದರು.

ಈ ಸಂಬಂಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

7 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

9 hours ago