ಕೊಪ್ಪಳ: ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಲೆಯರ ಮೇಲೆ ಅತ್ಯಾಚಾರ ನಡೆಸಿ ಒಬ್ಬನನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ ಅವರು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಇಬ್ಬರು ವಿದೇಶಿಯರು ಸೇರಿ ಐವರು ಪ್ರವಾಸಿಗರು ಇದ್ದ ಗುಂಪು ನಿಸರ್ಗ ವೀಕ್ಷಣೆಗೆ ಸಣಾಪುರದ ಕೆರೆಬಳಿ ಹೋಗಿತ್ತು ಆ ಸಂದರ್ಭದಲ್ಲಿ ಮೂವರು ಅಪರಿಚಿತರು ಅವರಬಳಿ ಬಂದು ನೂರು ರೂಪಾಯಿ ಕೇಳಿದ್ದಾರೆ ಆದರೆ ಪ್ರವಾಸಿಗರು 20 ರೂಪಾಯಿ ಕೊಟ್ಟಿದ್ದಾರೆ ಇದನ್ನು ನಿರಾಕರಿಸಿದ ಆ ಯುವಕರು ಜಗಳ ತೆಗೆದು ಹಲ್ಲೆ ನಡೆಸಿ ಅತ್ಯಾಚಾರ ವೆಸಗಿದ್ದಾರೆ ನಂತರ ಅವರ ಬಳಿ ಇದ್ದ ಎರಡು ಮೊಬೈಲ್ ಫೋನ್ ಗಳನ್ನು ಕಸಿದುಕೊಂಡು ಮೂವರನ್ನು ನೀರಿಗೆ ತಳ್ಳಲಾಗಿತ್ತು ಎಂದರು.
ನೀರಿಗೆ ತಳ್ಳಿದ ಮೂವರಲ್ಲಿ ಇಬ್ಬರು ನೀರಿನಿಂದ ಹೊರಗೆ ಬಂದಿದ್ದಾರೆ. ನಾಸಿಕ್ ಮೂಲದ ಬಿಬಾಷ್ ಎಂಬಾತ ಪತ್ತೆಯಾಗಿರಲಿಲ್ಲ ಇದರಿಂದ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಭಾರತೀಯ ನ್ಯಾಯ ಸಹಿತ ಕಲಂ 309(ಬಿ) 311,64(2),(ಎಲ್ ),70(1) ಸೇರಿದಂತೆ ಮುಂತಾದ ಸೆಕ್ಷನ್ ಗಳಲ್ಲಿ ಪ್ರಕರಣ ದಾಕಲಾಗಿತ್ತು ಅದರಂತೆ ಆರು ವಿಶೇಷ ತಂಡಗಳನ್ನು ರಚಿಸಲಾಗಿತ್ತು ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಲಾದ ಮಲ್ಲೇಶ್(22) ಮತ್ತು ಚೇತನ್ ಸಾಯಿ ಸಿಳ್ಳೇಕ್ಯಾತರ್(21) ಎಂಬ ಇಬ್ಬರು ಆರೋಪಿಗಳನ್ನು ಮಾರ್ಚ್ 8 ರಂದು ಬಂಧಿಸಲಾಗಿತ್ತು. ಆದರೆ ಮೂರನೇ ಆರೋಪಿಯ ಸೆರೆ ಆಗಿರಲಿಲ್ಲ ಎಂದರು.
ಮೂರನೇ ಆರೋಪಿ ತಮಿಳುನಾಡಿನ ಚೆನೈನಲ್ಲಿ ಇರುವುದಾಗಿ ಮಾಹಿತಿ ಬಂಡಮೆರೆಗೆ ನಮ್ಮ ತಂಡಗಳನ್ನು ಅಲ್ಲಿಗೆ ಕಳುಹಿಸಿ ೦೯ ಮಾರ್ಚ್ ೨೦೨೫ ರಂದು ಶರಣಬಸವರಾಜ್(೩೦) ಎಂಬ ಆರೋಪಿಯನ್ನು ಚೆನೈನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದರು.
ಮೂರು ಆರೋಪಿಗಳು ಈ ಕೃತ್ಯ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ, ಆರೋಪಿಗಳಿಂದ ಬೈಕ್ ಅನ್ನು ವಶಪಡಿಸಿಕೊಂಡು ಕ್ರಮ ಜರುಗಿಸಲಾಗಿದೆ ಎಂದು ಹೇಳಿದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…